ಚಾಮರಾಜನಗರ: ಕರ್ನಾಟಕದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾಗಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕೇವಲ 39 ದಿನಗಳಲ್ಲಿ 2.28 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.


COMMERCIAL BREAK
SCROLL TO CONTINUE READING

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿಯವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ ನಡೆಸಲಾಗಿದೆ. ಬರೋಬ್ಬರಿ 12 ಗಂಟೆಗಳ ಕಾಲ ಈ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕಳೆದ 39 ದಿನಗಳಲ್ಲಿ ಬರೋಬ್ಬರಿ 2,28,63,914 ರೂ. ಕಾಣಿಕೆ ಸಂಗ್ರಹವಾಗಿದೆ‌‌.


ಇದನ್ನೂ ಓದಿ: ಬಾಗಲಕೋಟೆ ಜಿಲ್ಲೆಯ ರಬಕವಿ ಪಟ್ಟಣದ ಪೂಜಾಗೆ ಸಂಕಷ್ಟ


ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ‘ಶಕ್ತಿ ಯೋಜನೆ’ಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮಲೆ ಮಾದಪ್ಪನ ಸನ್ನಿಧಿಗೆ ಭೇಟಿ ನೀಡುತ್ತಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ ಹಾಗೂ ಸರ್ಕಾರಿ ರಜೆ ದಿನಗಳು, ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.


ಹರಕೆಯ ರೂಪದಲ್ಲಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಮಲೆ ಮಾದಪ್ಪನ ಹುಂಡಿಗಳಲ್ಲಿ ಭಕ್ತರು 2.28 ಕೋಟಿ  ರೂ. ನಗದು ಕಾಣಿಕೆ ಸಲ್ಲಿಸಿದ್ದು, 92.5 ಗ್ರಾಂ ಚಿನ್ನ ಹಾಗೂ 2.7 ಕೆಜಿ. ಬೆಳ್ಳಿ ಸಂಗ್ರಹವಾಗಿದೆ.


ಇದನ್ನೂ ಓದಿ: ಗುಮ್ಮಟ ನಗರಿ ವಿಜಯಪುರದ ಪೋಲಿಸರು ಭರ್ಜರಿ ಕಾರ್ಯಾಚರಣೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.