ಮಂಗಳೂರು: 'ಭಾರತ ಹಿಂದೂ ರಾಷ್ಟ್ರ, ಇಲ್ಲಿಗೆ ಮುಸ್ಲಿಮರು ಬರಲು ಅವಕಾಶವಿಲ್ಲ' ಎಂಬ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಯುವಕನ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ನಗರದ ಮಾಲ್‌ವೊಂದರಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ವ್ಯಕ್ತಿಯ ಮೇಲೆ ಹಲ್ಲೆ ನಡೆದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. "ಭಾರತ ಹಿಂದೂ ರಾಷ್ಟ್ರವಾಗಿದ್ದು, ಮುಸ್ಲಿಮರು ಬರಲು ಅವಕಾಶ ಇಲ್ಲ" ಎಂದು ಆ ವ್ಯಕ್ತಿ ಹೇಳಿದ್ದರಿಂದಲೇ ಹಲ್ಲೆ ನಡೆದಿದೆ ಎನ್ನಲಾಗಿದೆ.


ಸಂತ್ರಸ್ತ ಯುವಕನನ್ನು ಬಂಟ್ವಾಳ ತಾಲೂಕಿನ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಹಲ್ಲೆ ಸಂಬಂಧ ಆತ ಪಂದೇಶ್ವರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಈ ಸಂಬಂಧ ಮೊಯಿದೀನ್ ಸಫ್ವಾನ್, ಅಬ್ದುಲ್ ರಹೀಮ್ ಸಾದ್ ಮತ್ತು ಓರ್ವ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. 


ಘಟನೆ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಆಯುಕ್ತರು, "ಈಗಾಗಲೇ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ವೀಡಿಯೋ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ" ಎಂದು ಹೇಳಿದ್ದಾರೆ.