ಮಂಡ್ಯ: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬೆಣ್ಣೆ ಇಡ್ಲಿ  ಎಂದೇ ಖ್ಯಾತಿಯಾಗಿದ್ದ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಗ್ರಾಮದ ಇಡ್ಲಿ ಶಿವಪ್ಪ ನಿಧನರಾಗಿದ್ದಾರೆ.


COMMERCIAL BREAK
SCROLL TO CONTINUE READING

ಸ್ಕೂಟರ್‍ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದ ಪರಿಣಾಮ ಕೆಳಕ್ಕೆ ಬಿದ್ದು ಶಿವಪ್ಪ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಗುರುವಾರ ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.


ಇದನ್ನೂ ಓದಿ: Farmer Protest : ತಾಕ್ಕತ್ತ್ ಇದ್ರೆ ಕಿತ್ತೂರ ಉತ್ಸವಕ್ಕೆ ಬರ್ರಿ : ಸಿಎಂಗೆ ರೈತ ಮುಖಂಡ ಸವಾಲು


ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಗ್ರಾಮದಲ್ಲಿ ಚಿಕ್ಕ ಹೋಟೆಲ್ ನಡೆಸ್ತಿದ್ದ ಶಿವಪ್ಪನವರು ತುಂಬಾ ಫೇಮಸ್ ಆಗಿದ್ದರು. ಈ ಹೋಟೆಲ್‍ನಲ್ಲಿ ರುಚಿ ರುಚಿಯಾದ ಬೆಣ್ಣೆ ಇಡ್ಲಿ ದೊರೆಯತ್ತಿದ್ದವು. ಈ ಹೋಟೆಲ್‍ನ ಬೆಣ್ಣೆ ಇಡ್ಲಿ ಸವಿಯಲು ಜನರು ಮಾರುದ್ದ ಕ್ಯೂನಲ್ಲಿ ನಿಲ್ತಿದ್ದರು.


ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಹುಕ್ಕೇರಿಯಲ್ಲಿ ಬೃಹತ್ ಸಮಾವೇಶ


ಎಲ್ಲರ ಬಾಯಲ್ಲೂ ಬೆಣ್ಣೆ ಇಡ್ಲಿ ಶಿವಪ್ಪ ಎಂದೇ ಖ್ಯಾತಿ ಪಡೆದಿದ್ದರು. ತಮ್ಮ ಮನೆಯಲ್ಲಿಯೇ ಜೀವನೋಪಾಯಕ್ಕೆ ಶಿವಪ್ಪನವರು ಸಣ್ಣ ಟೀ ಅಂಗಡಿ ಪ್ರಾರಂಭಿಸಿ ಪ್ರಸಿದ್ಧರಾಗಿದ್ದರು. ಶುಚಿ-ರುಚಿಗೆ ಖ್ಯಾತರಾಗಿದ್ದ ಇವರ ಹೋಟೆಲ್‍ನಲ್ಲಿ ಟೀ ಕುಡಿಯಲು ಸಾವಿರಾರು ಜನರು ಆಗಮಿಸುತ್ತಿದ್ದರು.  


ಮೃತ ಶಿವಪ್ಪನವರು ಪತ್ನಿ, ಪುತ್ರ ಸೇರಿದಂತೆ ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ್ದಾರೆ. ಶಿವಪ್ಪನವರ ಅಂತ್ಯಕ್ರಿಯೆ ದರಸಗುಪ್ಪೆ ಗ್ರಾಮದ ಬಳಿ ನಡೆಯಲಿದೆ ಎಂದು ತಿಳಿದುಬಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ