ಮಂಡ್ಯ: ತನ್ನ ಅಂತ್ಯ ಸಂಸ್ಕಾರಕ್ಕೆ ಮುಖ್ಯಮಂತ್ರಿಗಳು ಬರುವಂತೆ ವಿಡಿಯೋ ಸಂದೇಶ ಕಳಿಸಿರುವ ರೈತ ಸುರೇಶ್ (45) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ, ಸಂತೇಬಾಚಳ್ಳಿ ಹೋಬಳಿಯ, ಅಘಲಯ ಗ್ರಾಮದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ರೈತ ಸುರೇಶ್, ಕುಮಾರಸ್ವಾಮಿಯವರ ಅಭಿಮಾನಿಯೂ ಆಗಿದ್ದ ಎನ್ನಲಾಗಿದ್ದು, ವಿಡಿಯೋದಲ್ಲಿ ಸಂತೇಬಾಚಹಳ್ಳಿ ಹೋಬಳಿಯ ಎಲ್ಲ ಕೆರೆಗಳಿಗೆ ನೀರುತುಂಬಿಸಿ, ರೈತರನ್ನು ಕಾಪಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 


ನಿನ್ನೆ ಬೆಳಗ್ಗೆ ಜಮೀನಿನ ಬಳಿ ನೇಣು ಬಿಗುದುಕೊಂಡು ರೈತ ಸುರೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಕೆ.ಆರ್.ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಅಂತ್ಯಕ್ರಿಯೆಗೆ ಕುಮಾರಸ್ವಾಮಿಯನ್ನು ಆಹ್ವಾನಿಸಿ, ಸಾವಿಗೂ ಮುನ್ನ ಸುರೇಶ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವರ ಅಂತ್ಯ ಸಂಸ್ಕಾರದ ನಂತರ ವಿಡಿಯೋ ದೊರೆತಿದೆ.