ಸರ್ಕಾರದಿಂದ ಒಂದೂ ನಿವೇಶನ ಪಡೆದಿಲ್ಲ : ಎಂ.ಬಿ.ಪಾಟೀಲ

ನಮ್ಮ ಕುಟುಂಬಕ್ಕೂ ಬಾಗ್ಮನೆ ಕುಟುಂಬಕ್ಕೂ 25-30 ವರ್ಷಗಳಿಂದಲೂ ಪರಸ್ಪರ ಒಡನಾಟವಿದೆ. ಬೆಂಗಳೂರಿನ ಅಭಿವೃದ್ಧಿಗೆ ಪ್ರೆಸ್ಟೀಜ್, ಬ್ರಿಗೇಡ್, ಎಂಬೆಸಿ, ಮಂತ್ರಿ, ಬಾಗ್ಮನೆ ಸಮೂಹ ಸೇರಿದಂತೆ ಹಲವು ಉದ್ಯಮ ಸಮೂಹಗಳು ಕೊಡುಗೆ ನೀಡಿವೆ ಎಂದು ಸಚಿವ ಎಂ.ಬಿ. ಪಾಟೀಲ್‌.

Written by - Prashobh Devanahalli | Edited by - Krishna N K | Last Updated : Sep 2, 2024, 06:10 PM IST
    • ನಮ್ಮ ಕುಟುಂಬ ಜಿ- ಕ್ಯಾಟಗರಿ, ಕೆಎಚ್ ಬಿ ಅಥವಾ ಕೆಐಎಡಿಬಿಯ ನಿವೇಶನಗಳನ್ನು ಸರ್ಕಾರದಿಂದ ಪಡೆದುಕೊಂಡಿಲ್ಲ
    • ನಮ್ಮ ಕುಟುಂಬಕ್ಕೂ ಬಾಗ್ಮನೆ ಕುಟುಂಬಕ್ಕೂ 25-30 ವರ್ಷಗಳಿಂದಲೂ ಪರಸ್ಪರ ಒಡನಾಟವಿದೆ.
    • ಇದನ್ನು ನಾರಾಯಣಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವರು ತಿರುಗೇಟು ನೀಡಿದರು.
ಸರ್ಕಾರದಿಂದ ಒಂದೂ ನಿವೇಶನ ಪಡೆದಿಲ್ಲ : ಎಂ.ಬಿ.ಪಾಟೀಲ title=

ಬೆಂಗಳೂರು : ನಾನಾಗಲಿ, ನಮ್ಮ ಕುಟುಂಬದ ಇತರರಾಗಲಿ ಜಿ- ಕ್ಯಾಟಗರಿ, ಕೆಎಚ್ ಬಿ ಅಥವಾ ಕೆಐಎಡಿಬಿಯ ನಿವೇಶನಗಳನ್ನು ಸರ್ಕಾರದಿಂದ ಪಡೆದುಕೊಂಡಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೋಮವಾರ ಇಲ್ಲಿ ಸ್ಪಷ್ಟಪಡಿಸಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಆರೋಪಕ್ಕೆ ಅವರು ಪ್ರತಿಯುತ್ತರ ನೀಡಿದ್ದಾರೆ. ನಮ್ಮ ಕುಟುಂಬಕ್ಕೂ ಬಾಗ್ಮನೆ ಕುಟುಂಬಕ್ಕೂ 25-30 ವರ್ಷಗಳಿಂದಲೂ ಪರಸ್ಪರ ಒಡನಾಟವಿದೆ. ಬೆಂಗಳೂರಿನ ಅಭಿವೃದ್ಧಿಗೆ ಪ್ರೆಸ್ಟೀಜ್, ಬ್ರಿಗೇಡ್, ಎಂಬೆಸಿ, ಮಂತ್ರಿ, ಬಾಗ್ಮನೆ ಸಮೂಹ ಸೇರಿದಂತೆ ಹಲವು ಉದ್ಯಮ ಸಮೂಹಗಳು ಕೊಡುಗೆ ನೀಡಿವೆ. ಎಲ್ಲ ಪಕ್ಷಗಳ ಸರ್ಕಾರಗಳ ಆಡಳಿತಾವಧಿಯಲ್ಕೂ ಈ ಸಂಸ್ಥೆಗಳು ಈ ರೀತಿ‌ ನಿವೇಶನ ಪಡೆದು, ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡಿರುವುದನ್ನು ನಾರಾಯಣಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವರು ತಿರುಗೇಟು ನೀಡಿದರು. 

ಇದನ್ನೂ ಓದಿ: ಭಾಗ್ಯದ ಬಾಗಿಲು ತೆರೆಯಲು ಈ ಕೈಗೆ ಇದೇ ಬಣ್ಣದ ವಾಚ್‌ ಕಟ್ಟಿ.. ಅಲ್ಲಿಂದ ಶುರುವಾಗುತ್ತೆ ನಿಮ್ಮ ಲಕ್ಕಿ ಟೈಮ್‌ !

ಬಾಗ್ಮನೆಯೊಂದಿಗೆ ನಮ್ಮ ಕುಟುಂಬ ಮಟ್ಟದ ವ್ಯವಹಾರಕ್ಕೂ ಸರಕಾರದ ಮಟ್ಟದಲ್ಲಿ ಆಗುವ ನಿರ್ಧಾರಗಳಿಗೂ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಾಗ್ಮನೆ ಸಂಸ್ಥೆಯವರು ಬೆಂಗಳೂರಿನ ಏರೋಸ್ಪೇಸ್ ಪಾರ್ಕಿನಲ್ಲಿ ಕೈಗಾರಿಕಾ ನಿವೇಶನ ಕೋರಿ ಅರ್ಜಿ ಹಾಕಿದ್ದರು. ಇಂತಹ ಸಂದರ್ಭದಲ್ಲಿ ನಾವು ಸಂಸ್ಥೆಯ ಅರ್ಹತೆ, ಸಾಧನೆಗಳನ್ನು ಮಾತ್ರ ಪರಿಗಣಿಸುತ್ತೇವೆ ಅಷ್ಟೆ. ನಾರಾಯಣಸ್ವಾಮಿ ಅವರಿಗೆ ಇಂತಹ ಸರಳ ಸತ್ಯ ಗೊತ್ತಾಗದೆ ಇರುವುದು ಆಶ್ಚರ್ಯಕರ ಸಂಗತಿ ಎಂದು ಅವರು ವಿವರಿಸಿದ್ದಾರೆ.

ವೈಯಕ್ತಿಕ ಮತ್ತು ಸರಕಾರದ ಕೆಲಸಗಳನ್ನು ಪರಸ್ಪರ ತಳುಕು ಹಾಕಬಾರದು. ನಾರಾಯಣಸ್ವಾಮಿ ಇಂತಹ ಪ್ರಬುದ್ಧತೆಯನ್ನು ಪ್ರದರ್ಶಿಸಬೇಕು. ಇವರ ಮಾತುಗಳ ಹಿಂದೆ ಯಾರ ಕುಮ್ಮಕ್ಕು ಇದೆ ಎನ್ನುವುದು ಯಾರಿಗಾದರೂ ಅರ್ಥವಾಗುತ್ತದೆ ಎಂದು ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News