ಸೈಬರ್ ಅಪರಾಧ ತಡೆಗಟ್ಟಲು ಕ್ರಮ: ಗೃಹ ಸಚಿವ ಡಾ.ಜಿ ಪರಮೇಶ್ವರ್

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ, ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಆನ್‌ಲೈನ್ ಉದ್ಯೋಗ ವಂಚನೆ, ನಕಲಿ ಲೋನ್ ಆ್ಯಪ್ ವಂಚನೆಗೊಳಗಾಗುತ್ತಿದ್ದಾರೆ ಎಷ್ಟು ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕೆ ಕಾರಣಗಳೇನು? ಎಂದು ಪ್ರಶ್ನಿಸಿದರು.  

Written by - Prashobh Devanahalli | Last Updated : Jul 18, 2024, 03:12 PM IST
    • ಎಲ್ಲಾ ಠಾಣೆಗಳಲ್ಲೂ ಪ್ರಕರಣ ದಾಖಲಿಸಲು ಅವಕಾಶ
    • ಕಾನೂನು ಸುವ್ಯವಸ್ಥೆಯ ಠಾಣೆಯಲ್ಲಿಯೂ ದೂರು ದಾಖಲಿಸಬಹುದು.
    • ವಿಧಾನಪರಿಷತ್‌ನಲ್ಲಿ ಗೃಹ ಸಚಿವ ಪರಮೇಶ್ವರ ಹೇಳಿಕೆ
ಸೈಬರ್ ಅಪರಾಧ ತಡೆಗಟ್ಟಲು ಕ್ರಮ: ಗೃಹ ಸಚಿವ ಡಾ.ಜಿ ಪರಮೇಶ್ವರ್ title=
File Photo

ಬೆಂಗಳೂರು: ರಾಜ್ಯದಲ್ಲಿ ಜಿಲ್ಲೆಗೊಂದು ಸಿಇಎನ್ (ಸೈಬರ್, ಎಕನಾಮಿಕ್ಸ್ ಮತ್ತು ನಾರ್ಕೋಟಿಕ್) ಠಾಣೆಗಳನ್ನು ಸ್ಥಾಪಿಸಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ಇದನ್ನೂ ಓದಿ:  ಆರ್ ಚಂದ್ರು ಅವರಿಂದ ಅನಾವರಣವಾಯಿತು ಹಾರಾರ್ ಜಾನರ್ ನ "ಹಗ್ಗ" ಚಿತ್ರದ ಟೀಸರ್!   

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ, ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಆನ್‌ಲೈನ್ ಉದ್ಯೋಗ ವಂಚನೆ, ನಕಲಿ ಲೋನ್ ಆ್ಯಪ್ ವಂಚನೆಗೊಳಗಾಗುತ್ತಿದ್ದಾರೆ ಎಷ್ಟು ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕೆ ಕಾರಣಗಳೇನು? ಎಂದು ಪ್ರಶ್ನಿಸಿದರು.

ಇದಕ್ಕೆ ಗೃಹ ಸಚಿವ ಡಾ.‌ಜಿ.‌ಪರಮೇಶ್ವರ ಅವರು, ಈ ಹಿಂದೆ ರಾಜ್ಯದಾದ್ಯಂತ ಸಿಇಎನ್ (ಸೈಬರ್, ಎಕನಾಮಿಕ್ ಮತ್ತು ನಾರ್ಕೋಟಿಕ್ ಅಫೆನ್ಸ್) ಠಾಣೆಗಳು ಇರಲಿಲ್ಲ. ಜಿಲ್ಲೆಗೊಂದು ಸಿಇಎನ್ ಠಾಣೆಯನ್ನು ಸ್ಥಾಪಿಸಲಾಗಿದ್ದು, ರಾಜ್ಯದಲ್ಲಿ ಒಟ್ಟು 43 ಸಿಇಎನ್ ಠಾಣೆಗಳಿವೆ. ಎಲ್ಲ ಠಾಣೆಗಳಲ್ಲಿಯೂ ಸೈಬರ್ ಅಪರಾಧದ ಕುರಿತು ಪ್ರಕರಣ ದಾಖಲಿಸಿ, ಸಿಇಎನ್ ಠಾಣೆಗೆ ವರ್ಗಾಯಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಳ್ಳಲು ಅವಕಾಶ ಇರುವ ಕಾರಣಕ್ಕಾಗಿ ಇಷ್ಟೊಂದು ಸಂಖ್ಯೆಯಲ್ಲಿ ಸೈಬರ್ ಪ್ರಕರಣಗಳು ವರದಿಯಾಗುತ್ತಿವೆ ಎಂದು ತಿಳಿಸಿದರು.

ಇದನ್ನೂ ಓದಿ:  ಮತ್ತೆ ಶುರುವಾಗ್ತಿದೆ ಬಿಗ್‌ ಬಾಸ್‌ ಕನ್ನಡ: ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡ್ತಿದ್ದಾರೆ ಬ್ರೇಕಪ್‌ ಮಾಡ್ಕೊಂಡು ವಿವಾದ ಸೃಷ್ಟಿಸಿದ್ದ ಈ ಜೋಡಿ!?

ಯಾವುದೇ ವ್ಯಕ್ತಿಗೆ ಸೈಬರ್ ವಂಚನೆಯಾದರೆ ಕಾನೂನು ಸುವ್ಯವಸ್ಥೆಯ ಠಾಣೆಯಲ್ಲಿಯೂ ದೂರು ದಾಖಲಿಸಬಹುದು. ಸೈಬರ್ ಪ್ರಕರಣಗಳನ್ನು ವಿಶೇಷವಾಗಿ ಮೇಲ್ವಿಚಾರಣೆ ಮಾಡಲು ಸಿಐಡಿ ಘಟಕದಲ್ಲಿ ಸಿಇಎನ್ ವಿಭಾಗಕ್ಕೆ ಎಡಿಜಿಪಿ  ಹುದ್ದೆಯನ್ನು ಸೃಜಿಸಲಾಗಿದೆ. ಈಗಾಗಲೇ ನೇಮಕಾತಿ ಆರಂಭಿಸಲಾಗಿದ್ದು, ಎಷ್ಟು ಸಿಬ್ಬಂದಿಗಳ ಅವಶ್ಯಕತೆ ಇದೆಯೋ ತರಬೇತಿ ನೀಡಿ ನಿಯೋಜಿಸಲಾಗುವುದು. ಯಾವುದೇ ಕಾರಣಕ್ಕೂ ಸೈಬರ್ ಅಪರಾಧ ಪ್ರಕರಣಗಳನ್ನು ಹೆಚ್ಚಾಗಲು ಬಿಡುವುದಿಲ್ಲ. ಈ ಬಗ್ಗೆ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News