ಮೇಲುಕೋಟೆ: ಇಂದಿನಿಂದ ವಿಶ್ವವಿಖ್ಯಾತ  ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನಡೆಯಲಿದೆ. ಅದ್ದೂರಿ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ಏ.8 ರವರೆಗೆ ಉತ್ಸವ ನಡೆಯಲಿದೆ.


COMMERCIAL BREAK
SCROLL TO CONTINUE READING

ವೈರಮುಡಿ ಬ್ರಹ್ಮೋತ್ಸವಕ್ಕೆ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆಸಲಾಗಿದೆ. ಏ.1ರಂದು ವಿಶ್ವ ವಿಖ್ಯಾತ ವೈರಮುಡಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಏ.5ರಂದು ಚಲುವನಾರಾಯಣನ ತೆಪೋತ್ಸವ ಕಾರ್ಯಕ್ರಮ ನಡೆಯಲಿದೆ. ವೈರಮುಡಿ ಉತ್ಸವ ಕಣ್ತುಂಬಿಕೊಳ್ಳಲು ಬರುವ ಲಕ್ಷಾಂತರ ಭಕ್ತರಿಗಾಗಿ ಮೂಲ ಭೂತ ಸೌಕರ್ಯದ ಸೌಲಭ್ಯ ಮಾಡಲಾಗಿದೆ.


ಇದನ್ನೂ ಓದಿ: Yadgiri: ಬಟ್ಟೆ ಅಂಗಡಿಗೆ ಬೆಂಕಿ, ದಂಪತಿ ಸಜೀವ ದಹನ!


ಏ.1ರಂದು ವೈರಮುಡಿ ಉತ್ಸವಕ್ಕೆ ಜಿಲ್ಲಾ ಖಜಾನೆಯಿಂದ ಆಭರಣಗಳನ್ನು ರವಾನಿಸಲಾಗಿದೆ. ಮೇಲುಕೋಟೆಯಲ್ಲಿ 5 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ವೈರಮುಡಿ ಉತ್ಸವಕ್ಕೆ ಸುಮಾರು 4 ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ. ಪೊಲೀಸ್ ಇಲಾಖೆಯಿಂದಲೂ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ.


ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ವೈರಮುಡಿ ಉತ್ಸವ ಕಣ್ತುಂಬಿಕೊಳ್ಳುವಂತೆ ಡಿಸಿ ಹೆಚ್.ಎನ್.ಗೋಪಾಲಕೃಷ್ಣ ಮನವಿ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: Protest by Banjara community: ಮಾಜಿ ಸಿಎಂ ಬಿಎಸ್ ವೈ  ಮನೆ ಮೇಲೆ ಬಂಜಾರ ಸಮುದಾಯದಿಂದ ಕಲ್ಲು ತೂರಾಟ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.