ಬೆಂಗಳೂರು: ಇಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರಬೇಕಾದ ಅಕ್ಕಿ ಸರಬರಾಜು ಮಾಡುವಂತೆ ಮನವಿಯನ್ನು ಸಲ್ಲಿಸಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ತಿಂಗಳಿಗೆ ಎಷ್ಟು ಅಕ್ಕಿ ವಿತರಿಸಲಾಗುತ್ತಿದೆ. ವರ್ಷಕ್ಕೆ ಎಷ್ಟು ಅಕ್ಕಿ ಬೇಕಾಗುತ್ತದೆ ಎಂಬುವ ಬಗ್ಗೆ ಕೇಂದ್ರ ಸಚಿವರ ಮುಂದೆ ಪ್ರಸ್ತಾಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದರು.


COMMERCIAL BREAK
SCROLL TO CONTINUE READING

ಬಿಪಿಎಲ್ ಪಡಿತರ ಚೀಟಿಯಲ್ಲಿ ಎರಡು ಭಾಗ ಇದ್ದು, ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ  ಬಿಪಿಎಲ್ ಪಡಿತರದಾರರಿಗೆ  ಅಕ್ಕಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.  


ಇದನ್ನೂ ಓದಿ: ನೀವು ಖರೀದಿಸಿದ ಸಿಲಿಂಡರ್‌ ಫುಲ್‌ ಇದ್ಯಾ ಅಥವಾ ಅರ್ಧಂಬರ್ಧ ತುಂಬಿದ್ಯಾ? ಸುಲಭವಾಗಿ ಮನೆಯಲ್ಲೇ ಹೀಗೆ ಚೆಕ್‌ ಮಾಡಿ


ರಾಜ್ಯ ಸರ್ಕಾರ ಕರ್ನಾಟಕದಲ್ಲಿ 13 ಲಕ್ಷ ಬಿಪಿಎಲ್ ಪಡಿತರ ಕಾರ್ಡುಗಳನ್ನು ಹೊಂದಿದ್ದು ಅಂದರೆ 40 ರಿಂದ 50 ಲಕ್ಷ ಫಲಾನುಭವಿಗಳಿಗೆ  ರಾಜ್ಯ ಸರ್ಕಾರ ಅಕ್ಕಿಯನ್ನು ಕೊಡುತ್ತಿದ್ದೆ. ಅದಕ್ಕೆ ನಾವು ಕೇಂದ್ರ ಸ್ವಾಮ್ಯದ ಕೇಂದ್ರೀಯ ಭಂಡಾರ ಎನ್.ಸಿ.ಸಿ.ಎಫ್ ಅವರ ಮುಖಾಂತರ ಅಕ್ಕಿಯನ್ನು ಖರೀದಿ ಮಾಡುತ್ತಿದ್ದೇವೆ. ಈಗ ಅದು ಕೇಂದ್ರ ಸರ್ಕಾರ ಮುಂದೆ ಬಂದಿದ್ದು 28 ರೂಪಾಯಿಗೆ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ.


ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ  (ಎಫ್.ಸಿ.ಐ) 34 ರೂಪಾಯಿಯಂತೆ ಇಂದಿನ ಬೆಲೆಯಲ್ಲಿ ನೀಡಲಾಗುತ್ತಿತ್ತು. ಈಗ 28 ರೂಪಾಯಿಗೆ ಅಕ್ಕಿ ಕೊಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ನಾನು ಆದಷ್ಟು ಬೇಗ ಸಚಿವರಾದ ಪ್ರಹ್ಲಾದ್ ಜೋಶಿಯವರನ್ನು ಮಾತನಾಡಿ ನಮ್ಮ ರಾಜ್ಯಕ್ಕೆ ಬೇಕಾಗಿರುವ ಅಕ್ಕಿಯನ್ನು  ತೆಗೆದುಕೊಳ್ಳಬೇಕಾಗುತ್ತದೆ. ಇನ್ನುಳಿದ 5 ಕೆಜಿ ಅಕ್ಕಿಯನ್ನು ಕೇಂದ್ರ ಸರ್ಕಾರಕ್ಕೆ ಮೊದಲು ಕೇಳಿದ್ದೆವು ಆದರೆ ಕೇಂದ್ರ ಸರ್ಕಾರ ಕೊಡಲಿಲ್ಲ. ಈಗ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಮುಂದೆ ಬಂದಿದೆ. ಅದಕ್ಕೆ ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.  


ನಾವು ರಾಜ್ಯದಲ್ಲಿ ಸರ್ವೇ ಮಾಡಿರುವ ಪ್ರಕಾರ ಗ್ರಾಹಕರು ಐದು ಕೆಜಿ ಅಕ್ಕಿ ಜೊತೆಗೆ ಬೇಳೆ, ಎಣ್ಣೆ ,ಸಕ್ಕರೆ ಮುಂತಾದ ಆಹಾರ ಸಾಮಗ್ರಿಗಳನ್ನು (ಪದಾರ್ಥಗಳನ್ನು) ಕೊಟ್ಟರೆ ಅನುಕೂಲವಾಗುತ್ತದೆ ಎಂದು ರಾಜ್ಯದ 93 ಪಸೆರ್ಂಟ್ ಜನ ಅಭಿಪ್ರಾಯಪಟ್ಟಿದ್ದಾರೆ. ನಾನು ಇದನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಉಪ ಮುಖ್ಯಮಂತ್ರಿ ,ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಜೊತೆ ಚರ್ಚಿಸಿ ಯಾವ ರೀತಿ ಮಾಡಬೇಕು ಅನ್ನೋದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.


ಒಟ್ಟಾರೆ ರಾಜ್ಯ ಸರ್ಕಾರ ನೇರವಾಗಿ ಅಕ್ಕಿಯನ್ನು ಕೊಡುವುದರ ಬದಲಾಗಿ ಹಕ್ಕಿಯ ಜೊತೆ ಬೇಳೆ ಸಕ್ಕರೆ ಎಣ್ಣೆ ಮುಂತಾದ ಪದಾರ್ಥಗಳನ್ನು ನೀಡಿ ಎಂದು ಗ್ರಾಹಕರು ಕೇಳುತ್ತಿದ್ದು. ಇದರ ಅಂತಿಮ ತೀರ್ಮಾನ ಸರ್ಕಾರ  ಕೈಗೊಳ್ಳಬೇಕಾಗುತ್ತದೆ ಎಂದರು.


ಇದನ್ನೂ ಓದಿ: ʼಅಂತಹ ಪಾತ್ರ ಮಾಡೋಹಾಗಿಲ್ಲʼ ಎಂದು ನಟಿ ಅನುಷ್ಕಾಗೆ ತಾಕೀತು ಮಾಡಿದ್ದರಂತೆ ಈ ಸ್ಟಾರ್‌ ನಟ!! ಯಾರದು ಗೊತ್ತೇ? 


ರಾಜ್ಯದಲ್ಲಿ 13 ಲಕ್ಷ ಬಿಪಿಲ್ ಕಾರ್ಡುಗಳಿದ್ದು 45 ರಿಂದ 55 ಲಕ್ಷ ಪಡಿತರದಾರರಿದ್ದಾರೆ. ಅದಕ್ಕೆ ಪ್ರತಿ ತಿಂಗಳಿಗೆ 20 ಸಾವಿರ ಮೆಟ್ರಿಕ್ ಟನ್ ಬೇಕಾಗುತ್ತದೆ ಎಂದು ಸಚಿವರಲ್ಲಿ ಪ್ರಸ್ತಾಪಿಸಿರುವುದಾಗಿ ಸಚಿವರು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ