ಚಾಮರಾಜನಗರ: KRS ಮತ್ತು ಕಬಿನಿ ಹೊರಹರಿವಿನಿಂದ ಕಾವೇರಿ ಭೋರ್ಗರೆದು ಹರಿಯುತ್ತಿದ್ದು, ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿಗೆ ಕೇವಲ ಅರ್ಧ ಅಡಿ ಬಾಕಿ ಇದೆ. ಈ ಹಿನ್ನೆಲೆ ಯಾವುದೇ ಕ್ಷಣದಲ್ಲಾದರೂ ನೀರು ಹೊರಬಿಡಲು ಅಲ್ಲಿನ ಜಿಲ್ಲಾಡಳಿತವು ಸಜ್ಜಾಗಿದೆ.


COMMERCIAL BREAK
SCROLL TO CONTINUE READING

120 ಅಡಿ ಗರಿಷ್ಠ ಮಟ್ಟ ಹೊಂದಿರುವ ಮೆಟ್ಟೂರು ಜಲಾಶಯದಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆಗೆ 115 ಅಡಿ ನೀರಿದ್ದರೇ, ರಾತ್ರಿ ವೇಳೆಗೆ ಭರ್ತಿ ಸನಿಹ ತಲುಪಿದೆ. 2 ದಿನಗಳ ಅವಧಿಯಲ್ಲೇ 10 ಅಡಿಗೂ ಹೆಚ್ಚು ನೀರು ಸಂಗ್ರಹಗೊಂಡಿದ್ದು, ಹೊಗೆನಕಲ್ ಮೂಲಕ 1.20 ಲಕ್ಷ ಕ್ಯೂಸೆಕ್ ನೀರು ಜಲಾಶಯಕ್ಕೆ ಸೇರುತ್ತಿದೆ.


ಇದನ್ನೂ ಓದಿ: ‘ಸಿದ್ದರಾಮೋತ್ಸವ’ದ ಆರಂಭವೇ ಹೀಗಾದರೇ, ಅಂತ್ಯ ಹೇಗಿರಬಹುದು?: ಬಿಜೆಪಿ


ಅಣೆಕಟ್ಟೆಯ ಒಳಹರಿವು 1.20 ಲಕ್ಷ ಕ್ಯೂಸೆಕ್ ಇದ್ದು, ಹೊರಹರಿವು 20 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ. ಕಳೆದ 3-4 ವರ್ಷಗಳಿಂದಲೂ ಮೆಟ್ಟೂರು ಜಲಾಶಯ ಭರ್ತಿಯಾಗುತ್ತಿದ್ದು, 2020ರಲ್ಲಿ 6 ತಿಂಗಳ ಅವಧಿಯಲ್ಲಿ 2 ಬಾರಿ ತುಂಬಿ ತುಳುಕಿತ್ತು.


ತಮಿಳುನಾಡಿನ ಸೇಲಂ ಸೇರಿದಂತೆ ಸುತ್ತಮುತ್ತಲಿನ 12 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ವ್ಯವಸಾಯಕ್ಕೆ ಮೆಟ್ಟೂರು ಜಲಾಶಯ ಆಧಾರವಾಗಿದ್ದು, 16.4 ಲಕ್ಷ ಎಕರೆ ಪ್ರದೇಶದ ಕೃಷಿಗೆ ನೆರವಾಗಿದೆ.


ಇದನ್ನೂ ಓದಿಗೃಹಸಚಿವರಿಂದ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯ ಕಳೆದುಕೊಂಡಿದೆ: ಸಿದ್ದರಾಮಯ್ಯ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.