ಧಾರವಾಡ: ಧಾರವಾಡ ಜಿಲ್ಲೆ ಸಂಪೂರ್ಣ ಬರಪಿಡಿತ ಜಿಲ್ಲೆಯಾಗಿದ್ದು, ಗ್ರಾಮೀಣ ಭಾಗದ ಜನರಿಗೆ, ರೈತರಿಗೆ ಬರಗಾಲದ ಈ ಸಂದರ್ಭದಲ್ಲಿ ನರೇಗಾ ಯೋಜನೆ ಅವರ ಬದುಕಿಗೆ ಆಸರೆ ಆಗಿದೆ. ಕೂಲಿ ಕೇಳಿ ಬರುವ ಎಲ್ಲಿರಿಗೂ ಅವರ ಊರಲ್ಲಿಯೇ ಉದ್ಯೋಗ ನೀಡಲಾಗುತ್ತಿದ್ದು, ಕಳೆದ ವರ್ಷದ ಗುರಿಯಲ್ಲಿ ಶೇ. 90 ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕಿ ಅಧಿಕಾರಿ ಸ್ವರೂಪ ಟಿ.ಕೆ. ಅವರು ಹೇಳಿದರು.


COMMERCIAL BREAK
SCROLL TO CONTINUE READING

ಅವರು ಇಂದು ಮಧ್ಯಾಹ್ನ ವಿವಿಧ ಗ್ರಾಮಗಳಲ್ಲಿ ನರೇಗಾ ಕನವರಜನ್ಸ್ ಕಾರ್ಯಕ್ರಮದಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳ ವೀಕ್ಷಣೆ ನಂತರ ಮಾದನಬಾವಿ ಪ್ರಗತಿಪರ ರೈತ ದಯಾನಂದ ಹೊಳೆಹಡಗಲಿ ಅವರ ಪಪ್ಪಾಯಿ ತೋಟದಲ್ಲಿ ಅಭಿವೃದ್ಧಿ ಪ್ರವಾಸದಲ್ಲಿ ಪಾಲ್ಗೊಂಡಿದ್ದ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ, ಮಾತನಾಡಿದರು.


ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ, ಕೃಷಿಹೊಂಡ, ಕೃಷಿ ಬದು ನಿರ್ಮಾಣದ ಮೂಲಕ ಜಲಸಂರಕ್ಷಣೆ ಹಾಗೂ ರೈತರಿಗೆ ಸಂಪ್ರಾದಾಯಿಕ ಬೆಳೆಗಳ ಬದಲಿಗೆ ಪರ್ಯಾಯವಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಿ, ತೋಟಗಾರಿಕಾ ಬೆಳೆಗಳ ವಿಸ್ತರಣೆಗೆ ಆದ್ಯತೆಯನ್ನು ನೀಡಲಾಗಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ:Priyamani : ಸಿಂಪಲ್ ಸೀರೆಯಲ್ಲೂ ಸಕತ್ ಆಗಿ ಸೆಳೆಯುವ ಅಂದಗಾತಿ ಇವಳು : ಫೋಟೋಸ್ ಇಲ್ಲಿವೆ


ಧಾರವಾಡ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಒಟ್ಟು 1.69 ಲಕ್ಷ ಉದ್ಯೋಗ ಚೀಟಿಗಳಿವೆ ಇದರಲ್ಲಿ ಸುಮಾರು 81 ಸಾವಿರ ಉದ್ಯೋಗ ಚೀಟಿಗಳಿದ್ದು, 1.56 ಲಕ್ಷ ಜನ ಕೆಲಸಗಾರರಿದ್ದಾರೆ. ಮತ್ತು 4.03 ಲಕ್ಷ ಕಾಮಗಾರಿಗಳನ್ನು ಗುರುತಿಸಲಾಗಿದೆ ಎಂದು ಸಿಇಓ ಅವರು ತಿಳಿಸಿದರು.


2023-24 ನೇ ಸಾಲಿನ ಆರ್ಥಿಕ ವರ್ಷದಲ್ಲಿ 23.34 ಲಕ್ಷ ಮಾನವ ದಿನಗಳ ಗುರಿ ನೀಡಲಾಗಿತ್ತು. ಇದರಲ್ಲಿ ಶೇ. 89.77 ರಷ್ಟು ಗುರಿ ಸಾಧಿಸಲಾಗಿದೆ. ಮತ್ತು ಒಟ್ಟು 449 ಕುಟುಂಬಗಳಲ್ಲಿ 100 ಮಾನವ ದಿನಗಳ ಗುರಿಯನ್ನು ಸಾಧಿಸಿವೆ ಎಂದು ಅವರು ಹೇಳಿದರು.


ವಲಸೆ ಯಾಕ್ರಿ... ನಿಮ್ಮೂರಲ್ಲೇ ಉದ್ಯೋಗ ಖಾತ್ರಿ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಜನರಿಗೆ ನಿರಂತರವಾಗಿ ಉದ್ಯೋಗ ಒದಗಿಸಲಾಗುತ್ತಿದೆ. ಕೂಲಿ ಆಧಾರಿತ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ಹೆಚ್ಚಿನ ಜನರಿಗೆ ಸ್ಥಳಿಯವಾಗಿ ಉದ್ಯೋಗ ನೀಡಲಾಗುತ್ತಿದೆ.


ವಿಶೇಷಚೇತನರು, ಮಹಿಳೆಯರು, ಹಿರಿಯ ನಾಗರೀಕರು, ಮತ್ತು ದುರ್ಬಲ ವರ್ಗದವರಿಗೆ ಆದ್ಯತೆ ಮೇರೆಗೆ ಉದ್ಯೋಗ ಚೀಟಿ ಮತ್ತು ಕೆಲಸ ಪೂರೈಸಲಾತುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ವಲಸೆ ಪ್ರಮಾಣ ತಗ್ಗಿಸಲು ನರೇಗಾ ಯೋಜನೆಯಡಿ 265 ವಿವಿಧ ವೈಯಕ್ತಿಕ ಮತ್ತು ಸಮುದಾಯ ಆಧಾರಿತ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಸಿಇಓ ಅವರು ತಿಳಿಸಿದರು.


ನರೇಗಾ ಕೃಷಿಹೊಂಡ, ಬದು ನಿರ್ಮಾಣ, ಕುರಿದೊಡ್ಡಿ, ದನದ ಕೊಟ್ಟಿಗೆ, ಇಂಗುಗುಂಡಿ, ತೋಟಗಾರಿಕೆ ಬೆಳೆ ವಿಸ್ತರಣೆ ಪೌಷ್ಠಿಕ ತೋಟ, ಎರೆಹುಳ ಗೊಬ್ಬರ ಘಟಕ ಮುಂತಾದ ವೈಯಕ್ತಿಕ ಕಾಮಗಾರಿಗಳನ್ನು ಮತ್ತು ಸಮಗ್ರ ಕೆರೆ ಅಭಿವೃದ್ಧಿ, ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವುದು, ಸಾರ್ವಜನಿಕ ನಾಲಾ ಹೂಳೆತ್ತುವುದು. ಶಾಲಾ ಕಂಪೌಂಡ, ಶಾಲೆಯ ಆಟದ ಮೈದಾನ, ಸಂಪರ್ಕ ರಸ್ತೆ ಮತ್ತು ಗ್ರಾಮೀಣ ಸಂತೆ ಕಟ್ಟೆ ನಿರ್ಮಾಣದಂತ ಸಮುದಾಯ ಕಾಮಗಾರಿಗಳನ್ನು ಪ್ರೊತ್ಸಾಹಿಸಿ, ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಿಇಓ ಸ್ವರೂಪ ಟಿ.ಕೆ ಅವರು ಹೇಳಿದರು.


ಇದನ್ನೂ ಓದಿ: ಖ್ಯಾತ ನಿರ್ಮಾಪಕ ರಮೇಶ್ ರೆಡ್ಡಿ ಪುತ್ರಿ ವಿವಾಹ ಆರತಕ್ಷತೆಯಲ್ಲಿ ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿ


ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ ಅವರು ಮಾತನಾಡಿ ಜಿಲ್ಲೆಯಲ್ಲಿ ನರೇಗಾ ಯೋಜನೆ ಉತ್ತಮ ಮಟ್ಟದಲ್ಲಿ ಅನುಷ್ಠಾನಗೊಂಡಿದೆ. ಕರೆ ರಕ್ಷಣೆ, ಜಲರಕ್ಷಣೆ, ಆಹಾರ ಮತ್ತು ಆರ್ಥಿಕ ಬೆಳೆ ಬೆಳೆಯಲು ನರೇಗಾದಲ್ಲಿ ರೈತರಿಗೆ ಹೆಚ್ಚು ಪ್ರೇರಣೆ ನೀಡಲಾಗುತ್ತಿದೆ. ಸಾವಯುವ ಕೃಷಿ, ಹನಿನೀರಾವರಿ, ತುಂತುರು ನೀರಾವರಿಗೆ ಆದ್ಯತೆ ಕೊಡಲಾಗಿದೆ. ರೈತರನ್ನು ಆರ್ಥಿಕವಾಗಿ ಸಬಲರಾಗಲು ಮತ್ತು ಪ್ರತಿ ಅರ್ಹ ವ್ಯಕ್ತಿಗೆ ನರೇಗಾ ಕೂಲಿ ಕೊಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.


ಪ್ರಸಕ್ತ ವರ್ಷದ ಕ್ರೀಯಾಯೋಜನೆಯಲ್ಲಿ 328 ಕೆರೆಗಳನ್ನು ಹೂಳೆತ್ತುವ ಮತ್ತು ಅಭಿವೃದ್ಧಿಪಡಿಸುವ ಗುರಿಹೊಂದಲಾಗಿದೆ. ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಮಾದರಿಗಳು ನಿರ್ಮಾಣವಾಗಿದೆ ಎಂದು ಉಪಕಾರ್ಯದರ್ಶಿ ವಿಜಯಕುಮಾರ ಆಜೂರ ತಿಳಿಸಿದರು.


ಧಾರವಾಡ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಸ್ವಾಗತಿಸಿದರು. ಪಂಚಾಯತ ರಾಜ್ಯ ವಿಭಾಗದ ಸಹಾಯಕ ನಿರ್ದೇಶಕ ಗಿರೀಶ ಕೋರಿ ವಂದಿಸಿದರು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಧಾರವಾಡ ತಾಲೂಕು ಸಹಾಯಕ ನಿರ್ದೇಶಕ ಚಂದ್ರು ಪೂಜಾರ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಇಂತಿಯಾಜ್, ಮಾದನಬಾವಿ ಗ್ರಾಮಪಂಚಾಯತ ಪಿಡಿಓ ಶೇಖಪ್ಪ ಬೆಟದೂರ, ಡ್ರ್ಯಾಗನ್ ಫ್ರೂಟ್ಸ್ ಬೆಳೆದ ರೈತ ರಘುನಾಥ ಕ್ಯಾಸನೂರ ಮತ್ತು ಅರವಿಂದ ಚವ್ಹಾಣ, ಪಪ್ಪಾಯಿ ಬೆಳೆದ ರೈತ ದಯಾನಂದ ಹೊಳೆಹಡಗಲಿ ಹಾಗೂ ಇತರರಿದ್ದರು.ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದ್ದಾರೆ


ಮಾದನಭಾವಿ ಗ್ರಾಮಪಂಚಾಯತ ಘನತ್ಯಾಜ್ಯ ವಿಲೇವಾರಿ ಘಟಕ:


ಮಾದನಭಾವಿ ಗ್ರಾಮದ ಘನ ಮತ್ತು ದ್ರವ ತ್ಯಾಜ್ಯವನ್ನು ಸ್ವಚ್ಛ ಭಾರತ ಯೋಜನೆಯಡಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ(ಸ್ವಚ್ಛ ಸಂಕೀರ್ಣ ಘಟಕ)ವನ್ನು ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಿ, ಕಸವನ್ನು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಒಣಕಸ ಸಂಗ್ರಹಣೆ ಮಾಡಿ ವಿಲೇವಾರಿಯನ್ನು ಮಾಡಲಾಗುತ್ತಿದೆ, ಮತ್ತು ಸದರಿ ಯೋಜನೆಯಡಿಯಲ್ಲಿ ಬಚ್ಚಲು ಗುಂಡಿಗಳನ್ನು (ಸೋಪ್‍ಪಿಟ್) ನಿರ್ಮಾಣ ಮಾಡಿ ಮೂರು ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲಾಗುತ್ತಿದೆ.


ಈ ಘಟಕವು ಮೇ 5,2022 ಪ್ರಾರಂಭವಾಗಿದ್ದು, ಮಹಿಳಾ ಚಾಲಕಿಗೆ ಹಾಗೂ ಸಹಾಯಕಿಗೆ ಜನವರಿ 17, 2022 ರಿಂದ ಜನವರಿ 21, 2022 ವರೆಗೆ ತರಬೇತಿ ಪಡೆದಿರುತ್ತದೆ. ಇದರ ಅಧ್ಯಕ್ಷರು ಮಹಾದೇವಿ ಕೊಪ್ಪದ ಇವರು ಜಯಮಾತಾ ಮಹಿಳಾ ಸಂಘದಲ್ಲಿ ಇರುತ್ತಾರೆ. ಉಪಾಧ್ಯಕ್ಷರು ಜಯಶ್ರೀ ಬಾಂಬುರೆ ಇವರು ಕಾವೇರಿ ಸ್ತ್ರೀ ಶಕ್ತಿ ಸಂಘದಲ್ಲಿದ್ದು, ಈ ಘನ ತ್ಯಾಜ್ಯ ಘಟಕ ವಾಹನವು ಮನೆ ಮನೆಗೂ ಹೋಗಿ ಕಸ ಸಂಗ್ರಹಣೆ ಮಾಡುತ್ತದೆ. ಮತ್ತು ಹಸಿಕಸ, ಒಣಕಸವನ್ನು ಘಟಕದಲ್ಲಿ ಬೇರೆ ಬೇರೆ ವಿಂಗಡಣೆ ಮಾಡುತ್ತಾರೆ. ಇದ್ದರಿಂದ ಗ್ರಾಮವು ನೈರ್ಮಲ್ಯ ಆಗಿರುತ್ತದೆ. ದಿನನಿತ್ಯ ಮನೆ ಮನೆಗೆ ಹೋಗಿ ಕಸ ವಿಂಗಡಣೆ ಮಾಡುವುದರಿಂದ ರಸ್ತೆಗಳು, ಚರಂಡಿಗಳು ಸಚ್ಚವಾಗಿರುತ್ತವೆ. ಗ್ರಾಮದಲ್ಲಿ ಸೊಳ್ಳೆಗಳು ಕಡಿಮೆ ಪ್ರಮಾಣದಲ್ಲಿ ಇರುತ್ತವೆ, ಇದರಿಂದ ಗ್ರಾಮವು ನೈರ್ಮಲ್ಯತೆ, ಸ್ವಚ್ಛತೆಯಿಂದ ಕೊಡಿರುತ್ತದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.