ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ  ಭೂಕಂಪ(Earthquake) ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ.


COMMERCIAL BREAK
SCROLL TO CONTINUE READING

ಇಂದು ಬೆಳಿಗ್ಗೆ 6:55 ರ ಸುಮಾರಿಗೆ ಕರ್ನಾಟಕದ ಹಂಪಿ (Hampi)ಯಲ್ಲಿ 4.0 ತೀವ್ರತೆಯ ಭೂಕಂಪನ ಉಂಟಾಗಿದ್ದು ಇದೇ ವೇಳೆ ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ರಿಕ್ಟರ್ ಮಾಪಕದಲ್ಲಿ 4.7 ರಷ್ಟು ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ಒದಗಿಸಿದೆ.


ಭೂಕಂಪದ ಅನುಭವವಾಗುತ್ತಿದ್ದಂತೆ ಜನರು ತಮ್ಮ ಮನೆಗಳಿಂದ ಹೊರಬಂದಿರುವ ಘಟನೆ ಈ ವೇಳೆ ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ.


ಭೂಕಂಪದ ಸಂದರ್ಭದಲ್ಲಿ ಏನು ಮಾಡಬೇಕು?
ಭೂಕಂಪದಂತಹ ನೈಸರ್ಗಿಕ ವಿಪತ್ತಿನಿಂದ ತಪ್ಪಿಸಿಕೊಳ್ಳುವುದು ಕಷ್ಟ ಮತ್ತು ಅದನ್ನು ತಪ್ಪಿಸಲು ಸಾಧ್ಯವಿಲ್ಲ. ಆದರೆ ಕೆಲವು ತಾರ್ಕಿಕ ಕ್ರಿಯೆಗಳನ್ನು ಬಳಸಿಕೊಂಡು ಈ ಸ್ವಾಭಾವಿಕ ಹಾನಿಗಳ ಸಮಯದಲ್ಲಿ ನಿಮ್ಮನ್ನು ನೀವು ರಕ್ಷಿಸಿಕೊಳ್ಳಬಹುದು.


- ಭೂಕಂಪದ ಸಮಯದಲ್ಲಿ ಎಲಿವೇಟರ್ ಅನ್ನು ಬಳಸಬಾರದು.
- ಹೊರಗೆ ಹೋಗಲು ಎಲಿವೇಟರ್ ಬದಲಿಗೆ ಮೆಟ್ಟಿಲುಗಳನ್ನು ಬಳಸಿ.
- ನೀವು ಎಲ್ಲೋ ಸಿಕ್ಕಿಹಾಕಿಕೊಂಡಿದ್ದರೆ ಓಡುವುದು ಸೂಕ್ತವಲ್ಲ. ಭೂಕಂಪದಿಂದಾಗಿ ಇದು ಬಹಳಷ್ಟು ಪ್ರಭಾವ ಬೀರುತ್ತದೆ.
- ನೀವು ಕಾರು ಅಥವಾ ಯಾವುದೇ ವಾಹನವನ್ನು ಚಾಲನೆ ಮಾಡುತ್ತಿದ್ದರೆ, ಅದನ್ನು ತಕ್ಷಣ ನಿಲ್ಲಿಸಿ.
- ನೀವು ಚಾಲನೆ ಮಾಡುತ್ತಿದ್ದರೆ, ಕಟ್ಟಡ, ಸ್ತಂಭಗಳು, ಫ್ಲೈಓವರ್, ರಸ್ತೆ ಸೇತುವೆಯಿಂದ ದೂರ ಸಾಗಿ ಬಳಿಕ ವಾಹನವನ್ನು ನಿಲ್ಲಿಸಿ.
- ಭೂಕಂಪದ ಅನುಭವವಾದ ತಕ್ಷಣವೇ ಸುರಕ್ಷಿತ ಮತ್ತು ತೆರೆದ ಮೈದಾನದ ಬಳಿ ಸೇರಲು ಪ್ರಯತ್ನಿಸಿ. 
- ದೊಡ್ಡ ಕಟ್ಟಡಗಳು, ಮರಗಳು, ವಿದ್ಯುತ್ ಸ್ತಂಭಗಳಿಂದ ದೂರವಿರಿ.