ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್; ವಿದ್ಯುತ್, ತರಕಾರಿ, ಮೊಟ್ಟೆ ಬೆನ್ನಲ್ಲೇ ಇದೀಗ ಹಾಲಿನ ಸರದಿ!

Milk Price Hike: ಕಳೆದೊಂದು ತಿಂಗಳಿನಿಂದ ಹಾಲಿನ ದರ ಹೆಚ್ಚಳಕ್ಕೆ ಹಕ್ಕೊತ್ತಾಯ ಕೇಳಿಬರುತ್ತಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಳಕ್ಕೆ ಒಕ್ಕೂಟ ಸರ್ಕಾರಕ್ಕೆ ಆಗ್ರಹಿಸಿದೆ. ಈ ಕುರಿತು ಅಧ್ಯಕ್ಷರ ಅಪ್ಪಣೆ ಮೇರೆಗೆ ಹಾಲಿನ ದರ ಪರಿಷ್ಕರಣೆ ಕುರಿತು ಚರ್ಚೆ ಸಾಧ್ಯತೆಯಿದೆ.

Written by - Puttaraj K Alur | Last Updated : Jun 29, 2023, 02:40 PM IST
  • ತರಕಾರಿ ಸೇರಿ ಅಗತ್ಯವಸ್ತುಗಳು ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್
  • ವಿದ್ಯುತ್, ತರಕಾರಿ, ಮೊಟ್ಟೆ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ಹಾಲಿನ ದರವೂ ಏರಿಕೆಯಾಗುವ ಸಾಧ್ಯತೆ
  • ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಿಸುವಂತೆ 16 ಹಾಲಿನ ಒಕ್ಕೂಟಗಳಿಂದ ರಾಜ್ಯ ಸರ್ಕಾರಕ್ಕೆ ಆಗ್ರಹ
ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್; ವಿದ್ಯುತ್, ತರಕಾರಿ, ಮೊಟ್ಟೆ ಬೆನ್ನಲ್ಲೇ ಇದೀಗ ಹಾಲಿನ ಸರದಿ! title=
ಗ್ರಾಹಕರಿಗೆ ಹಾಲಿನ ದರದ ಬರೆ

ಬೆಂಗಳೂರು: ತರಕಾರಿ ಸೇರಿದಂತೆ ಅಗತ್ಯವಸ್ತುಗಳು ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಎದುರಾಗಿದೆ. ವಿದ್ಯುತ್, ತರಕಾರಿ, ಮೊಟ್ಟೆ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ಹಾಲಿನ ದರವೂ ಏರಿಕೆಯಾಗುವ ಸಾಧ್ಯತೆ ಇದೆ.

ಶೀಘ್ರದಲ್ಲಿ ಹಾಲಿನ ದರ ಪರಿಷ್ಕರಣೆ ಆಗಲಿದೆ ಎಂದು ಹೇಳಲಾಗುತ್ತಿದೆ. ಜುಲೈ 6ರಂದೇ KMF ಹಾಲಿನ ದರದ ಭವಿಷ್ಯ ನಿರ್ಧಾರ ಆಗಲಿದೆ ಅನ್ನೋ ಮಾತುಗಳು ಹೇಳಿಬರುತ್ತಿವೆ. ನಂದಿನಿ ಹಾಲಿನ ದರ ಹೆಚ್ಚಳಕ್ಕೆ 16 ಹಾಲು ಒಕ್ಕೂಟಗಳು ಸರ್ಕಾರವನ್ನು ಒತ್ತಾಯಿಸಿವೆ. ಈ ವಿಚಾರವಾಗಿ ಜುಲೈ 6ರಂದು ಕೆಎಂಎಫ್‍ನಿಂದ ಮಹತ್ವದ ಸಭೆ ನಡೆಯಲಿದೆ.

ಇದನ್ನೂ ಓದಿ: ಮುಂದುವರೆದ ರೇಣುಕಾಚಾರ್ಯ ವಾಗ್ದಾಳಿ; ಸುಧಾಕರ್, ಕಟೀಲ್, ಅಣ್ಣಾಮಲೈ ವಿರುದ್ಧ ಅಸಮಾಧಾನ

ಹೊಸ ಕೆಎಂಎಫ್ ಎಂಡಿ, ಹೊಸ ಅಧ್ಯಕ್ಷರ ನೇತೃತ್ವದಲ್ಲಿ‌ ಮೊದಲ ಸಭೆ ಜರುಗಲಿದೆ. ಈ ಸಭೆಯಲ್ಲಿ 16 ಹಾಲಿನ ಒಕ್ಕೂಟಗಳ ಅಧ್ಯಕ್ಷರು ಭಾಗಿಯಾಗಲಿದ್ದಾರೆ. ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಬೋರ್ಡ್ ಮೀಟಿಂಗ್ ನಡೆಯಲಿದೆ.

ಕಳೆದೊಂದು ತಿಂಗಳಿನಿಂದ ಹಾಲಿನ ದರ ಹೆಚ್ಚಳಕ್ಕೆ ಹಕ್ಕೊತ್ತಾಯ ಕೇಳಿಬರುತ್ತಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಳಕ್ಕೆ ಒಕ್ಕೂಟ ಸರ್ಕಾರಕ್ಕೆ ಆಗ್ರಹಿಸಿದೆ. ಈ ಕುರಿತು ಅಧ್ಯಕ್ಷರ ಅಪ್ಪಣೆ ಮೇರೆಗೆ ಹಾಲಿನ ದರ ಪರಿಷ್ಕರಣೆ ಕುರಿತು ಚರ್ಚೆ ಸಾಧ್ಯತೆಯಿದೆ.

ಇದನ್ನೂ ಓದಿ: ಬಿಜೆಪಿಯ ಗೊಂದಲ ಪರಿಹಾರಕ್ಕೆ ಉಚಿತ ಐಡಿಯಾ ನೀಡಿದ ಕಾಂಗ್ರೆಸ್: RSS ಲಾಠಿ ಬಗ್ಗೆ ವ್ಯಂಗ್ಯ!  

ಕೆಎಂಎಫ್ ಬೋರ್ಡ್ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಲಾಗುತ್ತದೆ. ಕೆಂಎಎಫ್‍ನ ನೂತನ ಅಧ್ಯಕ್ಷ ಭೀಮಾನಾಯ್ಕ್, ಎಂಡಿ ಜಗದೀಶ್ ಅವರಿಂದ ಸಿಎಂ ಸಿದ್ದರಾಮಯ್ಯರ ಭೇಟಿ ಸಾಧ್ಯತೆಯಿದೆ. 16 ಹಾಲಿನ ಒಕ್ಕೂಟ ಅಧ್ಯಕ್ಷರು ಹಾಲಿನ ದರವನ್ನು ಕೂಡಲೇ ಹೆಚ್ಚಿಸುವಂತೆ ಸಿಎಂಗೆ ಮನವಿ ಸಲ್ಲಿಸುವ ಸಾಧ್ಯತೆಯೂ ಇದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News