ಚಿಕ್ಕಮಗಳೂರು: ಸ್ವಚ್ಛತೆ ಪರಿಶೀಲನೆಗಾಗಿ ನಗರದ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದ ಮಹಿಳಾ‌ ಶೌಚಾಲಯಕ್ಕೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ದಿಢೀರ್ ಭೇಟಿ ಕೊಟ್ಟ ಹಿನ್ನೆಲೆಯಲ್ಲಿ ಅಲ್ಲಿದ್ದ ಮಹಿಳೆಯರು ಮುಜುಗರಕ್ಕೊಳಗಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. 


COMMERCIAL BREAK
SCROLL TO CONTINUE READING

ಚಿಕ್ಕಮಗಳೂರಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ತೆರಳಿದ್ದ ಸಚಿವ ಡಿ.ಸಿ.ತಮ್ಮಣ್ಣ ಅವರು ಅಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸ್ವಚ್ಛತೆ ಪರಿಶೀಲನೆಗೆ ಮುಂದಾದ ಅವರು ಮಹಿಳಾ ಶೌಚಾಲಯಕ್ಕೆ ಹೋಗಿದ್ದರಿಂದ ಅಲ್ಲಿದ್ದವರು ಕೊಂಚ ಮುಜುಗರ ಒಳಗಾದರು ಎನ್ನಲಾಗಿದೆ. 


ಇದೇ ಸಂದರ್ಭದಲ್ಲಿ ಶೌಚಾಲಯವನ್ನು ಪರಿಶೀಲಿಸಿದ ಸಚಿವರು ಶೌಚಾಲಯದಲ್ಲಿ ನೀರು ಇಲ್ಲದ‌ ಬಗ್ಗೆ ಅಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಯವರನ್ನು ತರಾಟೆಗೆ ತೆಗೆದುಕೊಂದಿದ್ದಾರೆ. ಅಲ್ಲದೆ, ಬಸ್ ನಿಲ್ದಾಣದ ಕೆಲವು ಅವ್ಯವಸ್ಥೆಗಳನ್ನು ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಎನ್ನಲಾಗಿದೆ.