ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರರಾದ ಚಲುವರಾಜು ಮನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.ಬಿಜೆಪಿ ಶಾಸಕರ ನಿಂದನೆ ಮಾತುಗಳಿಂದ ನೊಂದಿರುವ ಚಲುವರಾಜು ಹಾಗೂ ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದು, ಸರ್ಕಾರದಿಂದ ಸೂಕ್ತ ರಕ್ಷಣೆ ಹಾಗೂ ನ್ಯಾಯ ಒದಗಿಸುವುದಾಗಿ ಲಕ್ಷ್ಮೀ ಹೆಬ್ಬಾಳಕರ್  ಹೇಳಿದರು. 


COMMERCIAL BREAK
SCROLL TO CONTINUE READING

ಕಳೆದ ಎರಡು ದಿನಗಳಿಂದ ಮಾಧ್ಯಮದಲ್ಲಿ ಬರುತ್ತಿರುವ ವಿಚಾರವನ್ನು ಸೂಕ್ಷ್ಮವಾಗಿ ಸರ್ಕಾರ ಗಮನಿಸುತ್ತಿದೆ.ಮಹಿಳೆಯಾಗಿ ಇನ್ನೊಬ್ಬ ಮಹಿಳೆಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಆಡಿಯೋ ಕೇಳಿಸಿಕೊಂಡಿಲ್ಲ, ಅಸಹ್ಯವಾಗಿ ಇದೆ ಅಂತ ಕೇಳಿದವರು ಹೇಳುತ್ತಾರೆ.ಗುತ್ತಿಗೆದಾರ ಚಲುವರಾಜು ಜೊತೆ ಸರ್ಕಾರ ಇರುತ್ತದೆ. ಅವರ ಕುಟುಂಬದ ರಕ್ಷಣೆ ಜವಾಬ್ದಾರಿ ಸರ್ಕಾರದ್ದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಇದನ್ನೂ ಓದಿ : ಕೌಟುಂಬಿಕ ಕಲಹ: ಕಾವೇರಿಗೆ ಹಾರಿದ ಮಹಿಳೆ ಜನರಿಂದ ಬಚಾವ್


ಮುನಿರತ್ನ ಅವರಿಗೆ ಶೋಭೆ ತರುವುದಿಲ್ಲ: 
ಮಾಜಿ ಮಂತ್ರಿ ಗುತ್ತಿಗೆದಾರನ ಜಾತಿ ನಿಂದನೆ ಮಾಡುವುದು ಸರಿಯಲ್ಲ. ನಿಷ್ಪಕ್ಷಪಾತವಾಗಿ ಕಾನೂನು ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಮುನಿರತ್ನ ಅವರ ಮಾತುಗಳಿಂದ ಚಲುವರಾಜು ಕುಟುಂಬ ಖಿನ್ನತೆಗೆ ಒಳಪಟ್ಟಿದೆ. ಹೀಗಾಗಿ ಮಾನಸಿಕ ಒತ್ತಡ ಕಡಿಮೆ ಮಾಡುವುದಕ್ಕೆ  ಧೈರ್ಯ ಹೇಳುವುದಕ್ಕೆ ಅವರ ಮನೆಗೆ ಭೇಟಿ ನೀಡಿರುವೆ ಎಂದು ಸಚಿವರು ಹೇಳಿದರು. 


ಅಶೋಕ್ ಅವರಿಗೂ  ಗೊತ್ತಿದೆ :
ಎಫ್‌ಎಪ್‌ಎಲ್ ವರದಿ ಬರುವುದಕ್ಕಿಂತ ಮುಂಚೆಯೇ ಮುನಿರತ್ನ ಅವರನ್ನು ಬಂಧಿಸಿರುವ ಬಗ್ಗೆ ಆಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣದ ನಿಜಾಂಶ ಅವರಿಗೂ ಗೊತ್ತಿದೆ.ವಿರೋಧ ಪಕ್ಷದಲ್ಲಿರುವ ಕಾರಣ ಅವರು ಸರ್ಕಾರವನ್ನು ದೂರುವುದು, ಮುನಿರತ್ನ ಅವರನ್ನು ಸಮರ್ಥಿಸಿಕೊಳ್ಳುವುದು ಅನಿವಾರ್ಯ ಎಂದು ಸಚಿವರು ಹೇಳಿದರು. 


ಕಣ್ಣೀರು ಹಾಕಿದ ಚಲುವರಾಜು ಪತ್ನಿ :
ಸಚಿವರ ಎದುರು ಕಣ್ಣೀರು ಹಾಕಿದ ಚಲುವರಾಜು ಪತ್ನಿ, ನಮ್ಮ ಪತಿ ಹಾಗೂ ನಮ್ಮ ಮನೆಗೆ ಭದ್ರತೆ ಕೊಡಿ ಎಂದು ಮನವಿ ಮಾಡಿದರು.ಶಾಸಕರು ಹಣಕ್ಕಾಗಿ ಹಿಂಸೆ ಕೊಟ್ಟಿದ್ದಾರೆ.ಕೊಠಡಿಯಲ್ಲಿ ಕೂಡಿಹಾಕಿ ಹಿಂಸೆಕೊಟ್ಟಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಹೊಡೆದು ಹಾಕಿದ್ದು ಯಾರು ಗೊತ್ತಾ ಅಂತ ಕೇಳಿದ್ದಾರೆ ಎಂದು ಸಂಪೂರ್ಣ ಘಟನೆಯನ್ನು ಸಚಿವರಿಗೆ ಗುತ್ತಿಗೆದಾರ ಚಲುರಾಜು ವಿವರಿಸಿದರು. ಆಡಿಯೋ ವಿಚಾರದಲ್ಲಿ ನಿಜ ಗೊತ್ತಾಬೇಕು ಅಂದರೆ, ತಿರುಪತಿಗೆ ಬಂದು ಆಣೆ ಪ್ರಮಾಣ ಮಾಡಲಿ.ಆಡಿಯೋದಲ್ಲಿ ಯಾರ ದನಿ ಅನ್ನೊದು ಅವರು ತಿರುಪತಿಯಲ್ಲಿ ಹೇಳಲಿ ಎಂದು ಚಲುವರಾಜು ಸವಾಲು ಹಾಕಿದರು. 


ಇದನ್ನೂ ಓದಿ : ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?: ಹೆಚ್.ಡಿ ಕುಮಾರಸ್ವಾಮಿ


ಹನುಮಂತರಾಯಪ್ಪನ ಜೊತೆ ಮಾತಾಡಿರೋ ವಿಡಿಯೋ ವೈರಲ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಚಲುವರಾಜು, ಹೌದು ನಾನೇ ಮಾತಾಡಿರೋದು, ಮಾತಾಡಿರೋದು ಸತ್ಯ.ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ನಾನು ಸಹಕರಿಸುತ್ತಾ ಇದ್ದೇನೆ.ತನಿಖೆ ಮುಗಿಲಿ ಇನ್ನೂ ಎರಡು ಆಡಿಯೋ, ಸಿಡಿ ಇದೆ, ನಾಳೆ ಬಿಡುಗಡೆ ಮಾಡುತ್ತೇನೆ. ತನಿಖೆ ಮುಗಿದ ತಕ್ಷಣವೇ ನಾನು ಮತ್ತೆರಡು ಆಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.