ಬೆಳಗಾವಿ: ಶಾಸಕ ಮಹೇಶ್‌ ಕುಮಟಳ್ಳಿ ಅವರು ಬರುವ ಮಾರ್ಚ್ ಇಲ್ಲವೆ ಏಪ್ರಿಲ್‌ ಒಳಗೆ ಸಚಿವರಾಗುತ್ತಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಮೇಶ್‌ ಜಾರಕಿಹೊಳಿ(Ramesh Jarkiholi), ಬರುವ ಮಾರ್ಚ್-ಏಪ್ರಿಲ್‌ ಒಳಗೆ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ. ಇತ್ತೀಚೆಗೆ ಕೆಲವು ಮಾಧ್ಯಮಗಳು ಮಂಗಳೂರಿನಲ್ಲಿ ತಾವು ಗುಪ್ತ ಸಭೆ ಮಾಡಿದ್ದೇವೆ ಎಂಬ ಸುದ್ದಿ ಮಾಡಿದ್ದವು. ಅದು ಸತ್ಯಕ್ಕೆ ದೂರವಾದದ್ದು. ಮಂಗಳೂರಲ್ಲಿ ನನ್ನ ಪೂರ್ವ ನಿಯೋಜಿತ ಕಾರ್ಯಕ್ರಮ ಇತ್ತು. ಕೆಲವು ನೀರಾವರಿ ಯೋಜನೆಗಳ ಕುರಿತು ಸಭೆ ಇತ್ತು. ಆ ಸಮಯದಲ್ಲಿ ನಾವು ಯಾವುದೇ ಗುಪ್ತ ಸಭೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.


KPCC President: 'ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ಅಂತ್ಯದ ದಿನ ಹತ್ತಿರ ಬರುತ್ತಿದೆ'


17 ಜನ ಬಿಜೆಪಿಗೆ ಸೇರಿದವರಲ್ಲಿ ಯಾರಲ್ಲೂ ಭಿನ್ನಾಭಿಪ್ರಾಯ ಇಲ್ಲ. ಬಿಜೆಪಿಯಲ್ಲಿ ಭಿನ್ನಮತ ಎಂಬುದೇ ಇಲ್ಲ. ಪಕ್ಷದ ಹೈಕಮಾಂಡ್‌ ಕೈಗೊಳ್ಳುವ ಎಲ್ಲ ನಿರ್ಣಯಗಳಿಗೆ ನಾವೆಲ್ಲರೂ ಬದ್ಧರಿದ್ದೇವೆ. ಖಾತೆ ಹಂಚಿಕೆಯಲ್ಲಿ ಸಮಸ್ಯೆಯನ್ನು ನಮ್ಮ ನಾಯಕರಾದ ಸಿಎಂ ಬಿ.ಎಸ್‌.ಯಡಿಯೂರಪ್ಪನವರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂದರು.


Vinay Guruji: 'ಡಿಕೆಶಿ ಮಗಳ ಮದುವೆ ವ್ಯಾಲಂಟೈನ್ ಡೇಗೆ ಆಗಲೆಂದು ತಮಾಷೆ ಮಾಡಿದ್ದೇ, ಈಗ ಹಾಗೆ ಆಗ್ತಿದೆ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.