ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ. 2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಹುದ್ದೆ ಬಿಟ್ಟುಕೊಡುವಂತೆ ಸಿದ್ದರಾಮಯ್ಯರಿಗೆ ಒಕ್ಕಲಿಗ ಮತ್ತು ಲಿಂಗಾಯಿತ ಸ್ವಾಮೀಜಿಗಳು ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಸತೀಶ್ ಜಾರಕಿಹೊಳಿಯವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.   


COMMERCIAL BREAK
SCROLL TO CONTINUE READING

ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದು ಅಧ್ಯಾಯವಾಗಿದ್ದು, ಆ ಚರ್ಚೆಯನ್ನು ಮುಂದುವರೆಸುವ ಅವಶ್ಯಕತೆಯಿಲ್ಲ. ಯಾರು ಏನೇ ಹೇಳಿದರೂ ಅದೆಲ್ಲಾ ಮುಗಿದುಹೋದ ಅಧ್ಯಾಯ. ಮುಖ್ಯಮಂತ್ರಿ ಬದಲಾವಣೆಯಂತ ವಿಚಾರಗಳೆಲ್ಲವೂ ಹೈಕಮಾಂಡ್ ಹಾಗೂ ಪಕ್ಷದ ಪ್ರಮುಖರು ತೀರ್ಮಾನ ಮಾಡುವ ವಿಷಯ. ಈ ಬಗ್ಗೆ ಯಾರೂ ಹಾದಿ ಬೀದಿಯಲ್ಲಿ ಚರ್ಚೆ ಮಾಡಲು ಆಗಲ್ಲ. ಸಭೆ-ಸಮಾರಂಭಗಳಲ್ಲಿ ವೈಯಕ್ತಿಕವಾಗಿ ಹೇಳಿದರೆ ಅದಕ್ಕೆಲ್ಲಾ ಮಹತ್ವ ಇಲ್ಲ. ಅದೆಲ್ಲವೂ ಪಕ್ಷದ ವೇದಿಕೆಯಲ್ಲೇ ಚರ್ಚೆಯಾಗಬೇಕು ಎಂದು ಸತೀಶ್‌ ಹೇಳಿದ್ದಾರೆ. 


ಇದನ್ನೂ ಓದಿ: ಸಿದ್ದರಾಮಯ್ಯ ನೇತೃತ್ವದ ನಿಯೋಗದಿಂದ ಪ್ರಧಾನಿ ಮೋದಿ ಭೇಟಿ


ಚುನಾವಣೆಗೂ ಮುಂಚೆ ಸಮುದಾಯಕ್ಕೊಬ್ಬ ಡಿಸಿಎಂ ಹುದ್ದೆ ಬೇಕು ಅನ್ನೋ ಕೂಗು ಇತ್ತು, ಈಗಲೂ ಇದೆ. ಅದನ್ನು ಮಾಡಬೇಕಾ ಬೇಡವಾ ಎನ್ನುವ ವಿಚಾರ ವರಿಷ್ಠರಿಗೆ ಬಿಟ್ಟ ವಿಚಾರ. ಇದೇ ವೇಳೆ ಒಕ್ಕಲಿಗರಿಗೆ, ಲಿಂಗಾಯತರಿಗೆ ಸಿಎಂ ಸ್ಥಾನ ಸಿಗಬೇಕು ಎಂಬ ಬೇಡಿಕೆ ನಡುವೆಯೇ ಬಹುದಿನಗಳಿಂದ ಇರುವ ದಲಿತರಿಗೆ ಸಿಎಂ ಹುದ್ದೆ ಸಿಗಬೇಕೆಂಬ ಕೂಗಿನ ಬಗ್ಗೆಯೂ ಅವರು ಏನನ್ನೂ ಮಾತನಾಡಲಿಲ್ಲ. ದಲಿತರು ಮುಖ್ಯಮಂತ್ರಿಯಾಗುವ ವಿಚಾರದ ಬಗ್ಗೆ ನನ್ನ ಬಳಿ ಕೇಳಬೇಡಿ ಸಿದ್ದರಾಮಯ್ಯ & ರಾಹುಲ್ ಗಾಂಧಿ ಅವರನ್ನೇ ಕೇಳಿ. ನಮ್ಮ ಹೊಸ ಕೆಲಸ ಅಭಿವೃದ್ಧಿ ಬಗ್ಗೆ ಕೇಳಿ ಅಷ್ಟಕ್ಕೇ ಮಾತ್ರ ಸೀಮಿತವೆಂದು ಸಚಿವರು ತಿಳಿಸಿದರು.  


ಇನ್ನು ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ಸಂಬಂಧ ಇದೀಗ ಮತ್ತೊಬ್ಬ ಕಾಂಗ್ರೆಸ್ ನಾಯಕ ಧ್ವನಿಯೆತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಪಕ್ಷವು  ಸಚಿವ ಸತೀಶ್ ಜಾರಕಿಹೊಳಿಯವರನ್ನು ರಾಜ್ಯದ ಡಿಸಿಎಂ ಮಾಡಬೇಕೆಂದು ಬೆಳಗಾವಿಯ ಕಾಂಗ್ರೆಸ್ ಶಾಸಕ ಆಸಿಫ್ ಸೇಠ್ ಆಗ್ರಹಿಸಿದ್ದಾರೆ. ಸತೀಶ್ ಅವರು ಬೆಳಗಾವಿ ಜಿಲ್ಲೆಯ ಯಮಕನಮರಡಿಯಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಸತೀಶ್ ಅವರನ್ನು ಡಿಸಿಎಂ ಮಾಡುವಂತೆ ಒತ್ತಾಯಿಸುತ್ತಿದ್ದರೂ ಪ್ರಯೋಜನವಾಗಿಲ್ಲವೆಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ತಗ್ಗಿದ ಮಳೆ ಆರ್ಭಟ


ವೀರಶೈವ-ಲಿಂಗಾಯತ, SC/ST ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಂದ ಇನ್ನೂ ಮೂರು ಡಿಸಿಎಂಗಳ ಸೃಷ್ಟಿಸಬೇಕೆಂದು ಬೇಡಿಕೆ ಹೆಚ್ಚುತ್ತಿದೆ. ಸದ್ಯ ಒಕ್ಕಲಿಗ ಸಮುದಾಯದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತ್ರ ಡಿಸಿಎಂ ಆಗಿದ್ದಾರೆ. ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕ ʼಕೈʼ ಬಿಟ್ಟಿರುವ ಕಾರಣ ಸತೀಶ್ ಅವರನ್ನು ಡಿಸಿಎಂ ಹುದ್ದೆಗೆ ಏರಿಸಬೇಕು. ಸತೀಶ್ ಅವರನ್ನು ಡಿಸಿಎಂ ಮಾಡುವುದರಿಂದ ಉತ್ತರ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ಸತೀಶ್ ಅವರು ಎಲ್ಲ ಸಮುದಾಯಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ಎಲ್ಲ ವರ್ಗದ ನಾಯಕನಾಗಿದ್ದಾರೆ ಅಂತಾ ಹೇಳಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.