ಬೆಂಗಳೂರು : ಸಿವಿ ರಾಮನ್ ನಗರದ ಸಂಜಯ ನಗರ ಕೊಳಗೇರಿಯಲ್ಲಿ ಸೋಮವಾರ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟ ಗೊಂಡು ಹಾನಿಯಾದ ಮನೆಗಳನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ವೀಕ್ಷಿಸಿ ದರು. ಘಟನೆಯಿಂದ ಶಿಥಿಲಗೊಂಡಿರುವ 6 ಮನೆ ಒಳಗೊಂಡ ಇಡೀ ಬ್ಲಾಕ್ ನ 12 ಮನೆಗಳನ್ನು ಮುಖ್ಯಮಂತ್ರಿ ಯವರ ಸೂಚನೆ ಮೇರೆಗೆ ತಮ್ಮ  ವಿವೇಚನಾ ನಿಧಿ ಯಿಂದ ಹೊಸದಾಗಿ ಕಟ್ಟಿಕೊಡುವುದಾಗಿ ಸಚಿವರು ಇದೇ ಸಂದರ್ಭದಲ್ಲಿ ಘೋಷಿಸಿದರು.


COMMERCIAL BREAK
SCROLL TO CONTINUE READING

1994 ರಲ್ಲಿ ಹುಡ್ಕೋ ಅನುದಾನದಡಿ ಇಲ್ಲಿ ನಿರ್ಮಿಸಿ ರುವ 130 ಮನೆಗಳು ಶಿಥಿಲ ಗೊಂಡಿರುವ ಬಗ್ಗೆ ಸ್ಥಳೀಯರು ಮನವಿ ಮಾಡಿಕೊಂಡರು. ಈ ಬಗ್ಗೆ ಮುಖ್ಯಮಂತ್ರಿ ಯವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳವುದಾಗಿ ಸಚಿವರು ತಿಳಿಸಿದರು.


ಇದನ್ನೂ ಓದಿ : ಮೈಸೂರು ಜಿಲ್ಲೆಯಲ್ಲಿ ಗಣಪತಿ ವಿಸರ್ಜನೆ ವೇಳೆ ಕಿರಿಕ್


ನಂತರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿ ಉಚಿತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಿ, ಅಣ್ಣಾ ದೊರೆ ಎಂಬುವರಿಗೆ 50 ಸಾವಿರ ರೂ. ರೂಪಾಯಿ ನೆರವು ನೀಡಿದರು.ಇದೇ ಘಟನೆಯಲ್ಲಿ ಎರಡು ದ್ವಿಚಕ್ರ ವಾಹನ ಜಖಂಗೊಂಡಿದ್ದು,ರಿಪೇರಿ ಗಾಗಿ ತಲಾ 25 ಸಾವಿರ ರೂಪಾಯಿಗಳ ನೆರವು ನೀಡಿದ್ದಾರೆ. 


ಕಾಂಗ್ರೆಸ್ ಮುಖಂಡ ಆನಂದ್ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ : ರಾಜ್ಯದಲ್ಲಿ ತಾಲಿಬಾನ್‌ ಆಡಳಿತ ಮಾಡ್ತಿದೆ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.