ಮಂಡ್ಯ: ಶಾಲೆಯ ನೀರಿನ ಟ್ಯಾಂಕಿಗೆ ದುಷ್ಕರ್ಮಿಗಳು ವಿಷ ಬೆರೆಸಿದ ಪರಿಣಾಮ ಆ ನೀರನ್ನು ಕುಡಿದ 11 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ನಡೆದಿದೆ. 


COMMERCIAL BREAK
SCROLL TO CONTINUE READING

ದುಷ್ಕರ್ಮಿಗಳು ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕ್ರಿಮಿನಾಶಕ ಬೆರೆಸಿದ ನೀರು ಕುಡಿದು ಅಸ್ವಸ್ಥರಾದ 11 ಮಕ್ಕಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಅಸ್ವಸ್ಥ ವಿದ್ಯಾರ್ಥಿಗಳನ್ನು ದರ್ಶನ್, ಧನುಶ್, ಶಿವಲಿಂಗ, ಪ್ರಜ್ವಲ್, ತೇಜು, ಶಿವಲಿಂಗ, ಯಶವಂತ್, ಮಯೂರ್, ಚಂದ್ರು ಎಂದು ಗುರುತಿಸಲಾಗಿದೆ. ಘಟನೆ ಕುರಿತಂತೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.