ಶಾಸಕ ಅಬ್ಬಯ್ಯಾ ಕಿಡಿ, ಕಾಂಗ್ರೆಸ್ ನಲ್ಲಿ ತಳಮಳ; ಕಾರ್ಪೊರೇಟರ್‌ಗಳ ಎದೆಯಲ್ಲಿ ಢವಢವ

Congress: ಹುಬ್ಬಳ್ಳಿ- ಧಾರವಾಡ ಮಹಾನಗರ ಕಾಂಗ್ರೆಸ್‌ ಸಮಿತಿಯಲ್ಲಿ  ಭಿನ್ನಮತ ಸ್ಪೋಟ್ ಗೊಂಡಿದ್ದು ಪಕ್ಷ ವಿರೋಧಿ ಚಟುವಟಿಕೆ ಮಾಡೋರ ವಿರುದ್ದ ಕೈ ಶಾಸಕ ಪ್ರಸಾದ್ ಅಬ್ಬಯ್ಯ ಗರಂ ಆದ ಬೆನ್ನಲ್ಲೇ ಪಕ್ಷದ ವಿರೋಧಿಗಳ ನಿದ್ದೆ ಗದ್ದೆ ಗೆಡಿಸಿದೆ.   

Written by - Savita M B | Last Updated : Oct 31, 2023, 03:08 PM IST
  • ಒಂದು ಕಡೆ ರಾಜ್ಯ ನಾಯಕರ ನಡುವೆ ಬಂಡಾಯ, ಇತ್ತ ಲೋಕಲ್ ನಲ್ಲೂ ಭಿನ್ನಮತ ಸ್ಪೋಟಗೊಂಡಿದೆ
  • ಕೆಲ‌ ಕಾರ್ಪೋರೇಟರ್‌ಗಳು ಭಾರತೀಯ ಜನತಾ ಪಕ್ಷದ ನಾಯಕರ ಸಂಪರ್ಕದಲ್ಲಿರುವ ಹಿನ್ನಲೆಯಲ್ಲಿ ಶಾಸಕ ಅಬ್ಬಯ್ಯ ಗರಂ ಆಗಿದ್ದಾರೆ.
  • ನಮ್ಮ ಪಕ್ಷದಲ್ಲಿದ್ದು ದ್ರೋಹ ಮಾಡಿದ್ರೆ, ಇಲ್ಲೆ ಮುಗಿಸ್ತೀವಿ ಎಂದ ಅಬ್ಬಯ್ಯ, ಜಗದೀಶ್ ಶೆಟ್ಟರ್ ಕ್ಷೇತ್ರದಲ್ಲಿ ಕೆಲವರು ಮೋಸ ಮಾಡಿದ್ದಾರೆ.
ಶಾಸಕ ಅಬ್ಬಯ್ಯಾ ಕಿಡಿ, ಕಾಂಗ್ರೆಸ್ ನಲ್ಲಿ ತಳಮಳ; ಕಾರ್ಪೊರೇಟರ್‌ಗಳ ಎದೆಯಲ್ಲಿ ಢವಢವ title=

ಹುಬ್ಬಳ್ಳಿ: ಒಂದು ಕಡೆ ರಾಜ್ಯ ನಾಯಕರ ನಡುವೆ ಬಂಡಾಯ, ಇತ್ತ ಲೋಕಲ್ ನಲ್ಲೂ ಭಿನ್ನಮತ ಸ್ಪೋಟಗೊಂಡಿದೆ. ಕಾಂಗ್ರೆಸ್ ನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಸ್ಥಳೀಯ ಕೇಲ ಬ್ಲಾಕ್ ಸಮಿತಿಯ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ನಾಯಕರ ವಿರುದ್ದ ಪರೋಕ್ಷವಾಗಿ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದ ಶಾಸಕ ಅಬ್ಬಯ್ಯ ಅಸಮಾಧಾನ‌ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ2024 ಹಾಗೂ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ ಬೆನ್ನಲ್ಲೇ ಸಾಕಷ್ಟು ಆಕ್ರೋಶಕ್ಕೆ ಸಹ ಕಾರಣವಾಗಿದೆ. 

ಪದಾದಿಕಾರಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ  ನಂತರ ಒಂದು ಕಡೆ ಭಿನ್ನಮತ ಸ್ಪೋಟ್ ಆಗಿದ್ದು ಇನ್ನೊಂದು ಕಡೆ ಶಾಸಕರ ನಡೆ ಕುರಿತು ಸಹ ಕಾರ್ಯಕರ್ತರಲ್ಲಿ ಒಳೊಳಗೆ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡೋರನ್ನ ನಾನು ಬಿಡೋದಿಲ್ಲ ಎಂದು ನೇರವಾಗಿ ಎಚ್ಚರಿಕೆ ನೀಡಿದ ಶಾಸಕ ಅಬ್ಬಯ್ಯಾ. ಪಕ್ಷದಲ್ಲಿ ಇದ್ದು ದ್ರೋಹ‌ ಮಾಡಿದವರನ್ನು ನಾನು ಕ್ಷಮಿಸೋದಿಲ್ಲ. ಅವರನ್ನು ನಾನು ಪಕ್ಷದಲ್ಲಿ‌ ಉಳಿಸಿಕೊಳ್ಳುವುದಿಲ್ಲ ಎಂದಿದ್ದು ಮುಂದಿನ ಬೆಳವಣಿಗೆ ಸಹ ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ-ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ.. ರೈತರ ಹಿತ ಕಾಯುವುದು ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

ಕೆಲ‌ ಕಾರ್ಪೋರೇಟರ್‌ಗಳು ಭಾರತೀಯ ಜನತಾ ಪಕ್ಷದ  ನಾಯಕರ ಸಂಪರ್ಕದಲ್ಲಿರುವ ಹಿನ್ನಲೆಯಲ್ಲಿ ಶಾಸಕ ಅಬ್ಬಯ್ಯ ಗರಂ ಆಗಿದ್ದಾರೆ. ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ವಿರುದ್ಧ ಕೆಲಸ ಮಾಡಿದ್ದಾರೆ ಎಂಬ ಲಕ್ಷ ವಿರೋಧ ಚಟುವಟಿಕೆ ಈಗ ಸಾಕಷ್ಟು  ಚರ್ಚೆಗೆ ಗ್ರಾಸವಾಗಿದೆ.

ನಮ್ಮ ಪಕ್ಷದಲ್ಲಿದ್ದು ದ್ರೋಹ ಮಾಡಿದ್ರೆ, ಇಲ್ಲೆ ಮುಗಿಸ್ತೀವಿ ಎಂದ ಅಬ್ಬಯ್ಯ, ಜಗದೀಶ್ ಶೆಟ್ಟರ್ ಕ್ಷೇತ್ರದಲ್ಲಿ ಕೆಲವರು ಮೋಸ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ಕೆಲವರು ತಿಂದಮನೆಗೆ ಎರಡು ಬಗೆದಿದ್ದಾರೆ. ಅಂತವರನ್ನು‌ ಪಕ್ಷದಲ್ಲಿ ಇರೋಕೆ ನಾನು‌‌ ಕೊಡಲ್ಲ ಎಂದು ನೇರವಾಗಿ ಎಚ್ಚರಿಕೆ ನೀಡಿದ ಅಬ್ಬಯ್ಯ. ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಬ್ಬಯ್ಯ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ-ನಾವು ಚಳವಳಿ ಹೋರಾಟ ನಡೆಸುತ್ತಿದ್ದರೂ ಕ್ಯಾರೇ ಎನ್ನುತ್ತಿಲ್ಲ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News