ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ನಿಜ ಎಂದು ಬಳ್ಳಾರಿಯ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಖಚಿತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಆನಂದ್ ಸಿಂಗ್, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ನಿಜ. ರಾಜ್ಯಪಾಲರನ್ನು ಭೇಟಿಯಾದ ಬಳಿಕ ರಾಜೀನಾಮೆ ಕುರಿತು ಎಲ್ಲಾ ಮಾಹಿತಿಯನ್ನು ನೀಡುತ್ತೇನೆ ಎಂದು ಹೇಳಿದರು.


ತಮ್ಮ ವಸಂತನಗರದ ನಿವಾಸದಿಂದ ರಾಜಭವನಕ್ಕೆ ತೆರಳಿರುವ ಆನಂದ್ ಸಿಂಗ್ ರಾಜ್ಯಪಾಲರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ತಮ್ಮ ರಾಜೀನಾಮೆ ಕುರಿತಂತೆ ಮಾತುಕತೆ ನಡೆಸಲಿದ್ದಾರೆ.