ಬೆಂಗಳೂರು : ರಾಜ್ಯದ ಮುಸ್ಲಿಮರು ಹಾಗೂ ಕ್ರೈಸ್ತರಿಗೆ ನೀಡಿರುವ ಮೀಸಲಾತಿಯನ್ನು ಹಿಂಪಡೆಯಬೇಕೆಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಆಗ್ರಹಿಸಿದ್ದಾರೆ. ಈ ಬಗ್ಗೆ ಬೇಡಿಕೆಯನ್ನು ಮುಂದಿಟ್ಟು, ಅರವಿಂದ್ ಬೆಲ್ಲದ್  ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. 


COMMERCIAL BREAK
SCROLL TO CONTINUE READING

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ ರಾಜ್ಯದ ಮುಸ್ಲಿಮರು ಹಾಗೂ ಕ್ರೈಸ್ತರಿಗೆ ನೀಡಿರುವ ಮೀಸಲಾತಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ಮುಸ್ಲಿಮರು ಹಾಗೂ ಕ್ರೈಸ್ತರಿಗೆ ಒಬಿಸಿ ಅಡಿಯಲ್ಲಿ ನೀಡಿರುವ ಮೀಸಲಾತಿ ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದ್ದಾರೆ. ಆ ಕೋಟಾದಲ್ಲಿ ಲಿಂಗಾಯತರು, ಕುರುಬರು ಮತ್ತು ಮರಾಠರಿಗೆ ಮರುಹಂಚಿಕೆ ಮಾಡುವಂತೆ ಒತ್ತಾಯಿಸಿದ್ದಾರೆ.


[[{"fid":"261173","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಇದನ್ನೂ ಓದಿ : ವಾಮಮಾರ್ಗದಲ್ಲಿ ಇಡೀ ದೇಶದ ಮೇಲೆ ಹಿಂದಿ ಹೇರಿಕೆ; ಕೇಂದ್ರದ ಮೇಲೆ ಎಚ್ಡಿಕೆ ಕಿಡಿ


ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಮುಸ್ಲಿಮರು ಹಾಗೂ ಕ್ರೈಸ್ತರಿಗೆ ನೀಡಿರುವ ಮೀಸಲಾತಿ ತಾರತಮ್ಯದಿಂದ ಕೂಡಿದೆ ಎಂದು ಅರವಿಂದ್ ಬೆಲ್ಲದ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಈ ಮೀಸಲಾತಿಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಮಾತ್ರವಲ್ಲ, ಮುಸ್ಲಿಮರು ಹಾಗೂ ಕ್ರೈಸ್ತರಿಗೆ ನೀಡಿರುವ  ಮೀಸಲಾತಿಯನ್ನು ವಾಪಸ್ ಪಡೆದು ಬೇರೆ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ : ಒಕ್ಕಲಿಗ ಸಮುದಾಯದಿಂದ 10% ಮೀಸಲಾತಿ ಹೆಚ್ಚಳಕ್ಕೆ ಮನವಿ: ಸಚಿವ ಆರ್. ಅಶೋಕ್ ಹೇಳಿದ್ದೇನು?


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.