ಹಿಂದಿನ ಸರ್ಕಾರಗಳಿಗಿಂತ ಹೆಚ್ಚಿನ ಹಣ ಬೊಕ್ಕಸದಲ್ಲಿದೆ: ಸಚಿವ ಆರ್.ಅಶೋಕ್

Minister R Ashok: ಹನೂರಿನಲ್ಲಿ ಇಂದು ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎನ್ನುವುದು ಸುಳ್ಳು. ನಮ್ಮ ಬೊಕ್ಕಸ ತುಂಬಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. 

Written by - Chetana Devarmani | Last Updated : Dec 13, 2022, 05:44 PM IST
  • ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎನ್ನುವುದು ಸುಳ್ಳು
  • ಹಿಂದಿನ ಸರ್ಕಾರಗಳಿಗಿಂತ ಹೆಚ್ಚಿನ ಹಣ ಬೊಕ್ಕಸದಲ್ಲಿದೆ
  • ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ
ಹಿಂದಿನ ಸರ್ಕಾರಗಳಿಗಿಂತ ಹೆಚ್ಚಿನ ಹಣ ಬೊಕ್ಕಸದಲ್ಲಿದೆ: ಸಚಿವ ಆರ್.ಅಶೋಕ್  title=
ಆರ್.ಅಶೋಕ್

ಚಾಮರಾಜನಗರ: ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎನ್ನುವುದು ಸುಳ್ಳು, ನಮ್ಮ ಬೊಕ್ಕಸ ತುಂಬಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಹನೂರಿನಲ್ಲಿ ಇಂದು ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಹಣ ಇಲ್ಲ- ಹಣ ಇಲ್ಲಾ ಅಂಥಾ ಯಾರ್ಯಾರೋ ಅಂತಿರ್ತಾರೆ. ಆದರೆ, ನಮ್ಮ ಸರ್ಕಾರದ ಬೊಕ್ಕಸ ತುಂಬಿದೆ, ಹಿಂದಿನ ಯಾವ ಸರ್ಕಾರದಲ್ಲಿರದಷ್ಟು ಹಣ ನಮ್ಮ ಸರ್ಕಾರದಲ್ಲಿದೆ, ಹಣ ಇದ್ದಿದ್ದರಿಂದಲೇ ಸಾವಿರಾರು ಕೋಟಿ ರೂ. ಯೋಜನೆ ಘೋಷಣೆಯಾಗುತ್ತಿದೆ- ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ ಎಂದರು.

ಇದನ್ನೂ ಓದಿ : ಮಹಿಳಾ ವಿರೋಧಿ ಕಾಂಗ್ರೆಸ್ ನಾಯಕರು ಸೋನಿಯಾರನ್ನು ಹೇಗೆ ಸಹಿಸಿಕೊಂಡರು?: ಬಿಜೆಪಿ

ಸಿಎಂ ಬಸವರಾಜ ಬೊಮ್ಮಾಯಿ ಕಾಮನ್ ಮ್ಯಾನ್ ಸಿಎಂ, 40 ವರ್ಷಗಳಿಂದ ಒಂದೇ ಮನೆಯಲ್ಲಿದ್ದಾರೆ, ಅವರು ಯಾವ ಮನೆಯನ್ನೂ ಕಟ್ಟಿಕೊಂಡಿಲ್ಲ, ಜನಪರವಾಗಿ, ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿರುವ ರೈತರಿಗೆ ನಮ್ಮ ಸರ್ಕಾರ ಯಾವುದೇ ತೊಂದರೆ ಕೊಡುವುದಿಲ್ಲ, ಶೀಘ್ರದಲ್ಲೇ ಹಕ್ಕುಪತ್ರಗಳನ್ನು ನೀಡುತ್ತೇವೆ‌‌. ನಮ್ಮದು ಡಬಲ್ ಎಂಜಿನ್ ಸರ್ಕಾರ, ಎರಡು ಪಟ್ಟು ವೇಗದಲ್ಲಿ ಅಭಿವೃದ್ಧಿ ಎಂದು ಹೇಳಿದರು. 

ಇದನ್ನೂ ಓದಿ : ರಾಜಧಾನಿಯಲ್ಲಿ ಸಾವಿರ ಕೆ.ಜಿ.ತೂಕದ ಬೃಹದಾಕಾರದ ಕರದಂಟು ಪ್ರದರ್ಶನ

ಸಚಿವ ಸೋಮಣ್ಣ ಮಾತನಾಡಿ ಕಾಡೊಳಗಿರುವ ಚಂಗಡಿ ಗ್ರಾಮವನ್ನು ಶೀಘ್ರವೇ ಸ್ಥಳಾಂತರಿಸಲು ರೂಪುರೇಷೆ ಸಿದ್ಧವಾಗುತ್ತಿದೆ ಆ ಕಾರ್ಯ ತ್ವರಿತವಾಗಿ ಆಗಲಿದೆ, ಯಾವುದೇ ಕಾರಣಕ್ಕೂ ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಬೆರೆಸಬಾರದು ಎಂದು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News