ಮೈಸೂರು : ಯಾವ ಸರ್ಕಾರ ಬಂದರೂ ಮಹಿಷ ದಸರಾ ಆಚರಣೆ ಮಾಡುವಂತಿಲ್ಲ. ಇದರಿಂದ ಬಹುಸಂಖ್ಯಾತರ ಭಾವನೆಗೆ ಧಕ್ಕೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಿಷ ದಸರಾ ಅದೆಂಗ್ ಮಾಡ್ತಾರೋ ಮಾಡಲಿ ನೋಡ್ತೀನಿ ಎಂದು ಸಂಸದ ಪ್ರತಾಪ್‌ ಸಿಂಹ ಸರ್ಕಾರಕ್ಕೆ ಸವಾಲ್‌ ಹಾಕಿದರು.


COMMERCIAL BREAK
SCROLL TO CONTINUE READING

ಯಾವ ಸರ್ಕಾರ ಬಂದರೂ ಮಹಿಷ ದಸರಾ ಆಚರಣೆ ಮಾಡುವಂತಿಲ್ಲ. ಇದರಿಂದ ಬಹುಸಂಖ್ಯಾತರ ಭಾವನೆಗೆ ಧಕ್ಕೆಯಾಗುತ್ತದೆ. ಏನೇ ಕಷ್ಟ ಬಂದರೂ ಲಕ್ಷಾಂತರ ಮಂದಿ ಚಾಮುಂಡಿ ತಾಯಿಯ ಬಳಿ ಹೋಗುತ್ತಾರೆ. ಹೀಗಿರುವಾಗ ತಾಯಿಯನ್ನು ತುಚ್ಛವಾಗಿ ಮಾತನಾಡುವವರಿಗೆ ಹೇಗೆ ಅವಕಾಶ ನೀಡ್ತಾರೆ ಎಂದರು.


ಇದನ್ನೂ ಓದಿ: ಚುನಾವಣೆ ಮುಗಿದರೂ ನಾಯಕ ನಿಲ್ಲದೆ ಬಿಜೆಪಿ ಹತಾಶೆ ಸ್ಥಿತಿಗೆ ತಲುಪಿದೆ: ಎಂಬಿ ಪಾಟೀಲ್


ಅಲ್ಲದೆ, ಬಿ.ಎಸ್. ಯಡಿಯೂರಪ್ಪ ನವರು ಮುಖ್ಯಮಂತ್ರಿ ಆಗಿದ್ದಾಗ ಸೋಮಣ್ಣ ಹಾಗೂ ನಾವು ಸೇರಿ ಅನುಮತಿಗೆ ಅವಕಾಶ ಕೊಟ್ಟಿರಲಿಲ್ಲ. ಮೈಸೂರಿಗರು ಈ ವಿಚಾರದಲ್ಲಿ ಒಟ್ಟಾಗಬೇಕು. ನಿಮಗೆ ಏನೇ ಕಷ್ಟ- ಸುಖ ಬಂದರೂ ತಾಯಿ ಬಳಿ ಬೇಡಿಕೊಳ್ಳುತ್ತೀರಿ. ಅಂತಹ ತಾಯಿಗೆ ಅವಮಾನವಾಗುವಾಗ ನೀವೆಲ್ಲ ಒಟ್ಟಿಗೆ ಹೋರಾಡಬೇಕು ಎಂದು ಕರೆ ನೀಡಿದರು.


ಈಗ ಮಹಿಷ ದಸರಾ ಮಾಡುವ ನಾಲ್ಕು ಜನರ ಮನೆಯಲ್ಲಿ ಹೋಗಿ ನೋಡಿ. ಅವರ ಹೆಂಡತಿಯರು ಚಾಮುಂಡಿ ತಾಯಿಯನ್ನು ಆರಾಧನೆ ಮಾಡುತ್ತಾರೆ. ಇವರಿಗೆ ಕನಿಷ್ಠ ಅವರ ಮನೆಯವರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಆದರೆ ಇಲ್ಲಿ ಬಂದು ಉದ್ದುದ್ದ ಮಾತನಾಡುತ್ತಾರೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಗುಡುಗಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.