ಶಿವಮೊಗ್ಗ ಗಲಾಟೆ ಪ್ರಕರಣ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಿ : ರೇಣುಕಾಚಾರ್ಯ

ಸರ್ಕಾರವೇ ಮುಸ್ಲಿಂರ ತುಷ್ಟೀಕರಣಕ್ಕೆ ಮುಂದಾಗಿದ್ದು ಇದರಿಂದ ಪ್ರಚೋದನೆಗೆ ಒಳಗಾದ ಕೆಲ ಪುಂಡರು ಈ ರೀತಿಯ ಕೃತ್ಯವೆಸಗಿದ್ದಾರೆ. ಶಿವಮೊಗ್ಗ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಿದರಷ್ಟೆ ಸಾಲದು ಅವರನ್ನು ಎನ್‌ಕೌಂಟರ್ ಮಾಡಬೇಕು ಎಂದು ಬಿಜೆಪಿ ನಾಯಕ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು.

Written by - Krishna N K | Last Updated : Oct 5, 2023, 01:51 PM IST
  • ಸರ್ಕಾರವೇ ಮುಸ್ಲಿಂರ ತುಷ್ಟೀಕರಣಕ್ಕೆ ಮುಂದಾಗಿದೆ.
  • ಶಿವಮೊಗ್ಗ ಗಲಾಟೆ ಪ್ರಕರಣದ ಆರೋಪಿಗಳನ್ನು ಎನ್‌ಕೌಂಟರ್‌ ಮಾಡ್ಬೇಕು.
  • ಶಿವಮೊಗ್ಗ ಗಲಭೆ ಕುರಿತು ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೆ.
ಶಿವಮೊಗ್ಗ ಗಲಾಟೆ ಪ್ರಕರಣ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಿ : ರೇಣುಕಾಚಾರ್ಯ title=

ದಾವಣಗೆರೆ : ಶಿವಮೊಗ್ಗ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಿದರಷ್ಟೆ ಸಾಲದು ಅವರನ್ನು ಎನ್‌ಕೌಂಟರ್ ಮಾಡಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಹಿಂದುಗಳ ಮನೆಗಳು ಜಖಂ ಆಗಿದ್ದು ಕೂಡಲೇ ಅವರಿಗೆ ಪರಿಹಾರ ನೀಡಿ ನೆರವಿಗೆ ದಾವಿಸಬೇಕು ಎಂದರು. 

ಇದನ್ನೂ ಓದಿ: ತಂಗಿಯನ್ನು ಮುದ್ದು ಮಾಡುವ ಚಿರು ಪುತ್ರ ರಾಯನ್‌ ಕ್ಯೂಟ್‌ ವಿಡಿಯೋ

ಸರ್ಕಾರವೇ ಮುಸ್ಲಿಂರ ತುಷ್ಟೀಕರಣಕ್ಕೆ ಮುಂದಾಗಿದ್ದು ಇದರಿಂದ ಪ್ರಚೋದನೆಗೆ ಒಳಗಾದ ಕೆಲ ಪುಂಡರು ಈ ರೀತಿಯ ಕೃತ್ಯವೆಸಗಿದ್ದಾರೆ. ಅಲ್ಲದೆ, ಯಾವುದೇ ಕಾರಣಕ್ಕೂ ಸರ್ಕಾರ ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ಪ್ರಕರಣಗಳನ್ನು ವಾಪಸ್ಸು ಪಡೆಯಬಾರದೆಂದು ಸರ್ಕಾರಕ್ಕೆ‌ ಎಚ್ಚರಿಕೆ ನೀಡಿದರು.

ಶಿವಮೊಗ್ಗದಲ್ಲಿ ನಡೆದ ಗಲಾಟೆಗೆ ಬಿಜೆಪಿ ಕಾರ್ಯಕರ್ತರು ಕಾರಣ ಎಂದು ರಾಮಲಿಂಗಾರೆಡ್ಡಿ ಹೇಳಿದ್ದು ಖಂಡನೀಯ, ಹಿಂದುಗಳು ಯಾರೂ ಕೂಡ ಈ ರೀತಿಯ ಕೃತ್ಯವೆಸಗುವುದಿಲ್ಲ. ಕೂಡಲೇ ಅವರು ರಾಜ್ಯದ ಜನರ ಕ್ಷಮೆ ಯಾಚಿಸ‌ಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಪಾಳು ಬಿದ್ದಿರುವ ರಾಜ್ಯದ ಪ್ರಥಮ ಮೊಲ ಸಾಕಾಣಿಕಾ ಕೇಂದ್ರ

ಶಿವ, ದುರ್ಗೆ, ಆಂಜನೇಯ ಶಿಷ್ಟ ಸಂಹಾರಕ್ಕೆ ಆಯುಧ ಬಳಸುತ್ತಿದ್ದರು. ಆದರೇ ಇವರು ತಲಾವರ್ ಪ್ರದರ್ಶನ ಮಾಡಿದ್ದು ಯಾವ ಯಾವುದರ ಸಂಕೇತ ಎಂದು ಪ್ರಶ್ನೆ ಮಾಡಿದರು. ಹಿಂದುಗಳ ಭಾವನೆಗಳಿಗೆ ದಕ್ಕೆ ತರುವಂತಹ ಹೇಳಿಕೆಗಳನ್ನು ನೀಡುವುದನ್ನು ಮೊದಲು ಕಾಂಗ್ರೆಸ್‌ ಸಚಿವರು ಬಿಡಬೇಕು. ಶಿವಮೊಗ್ಗ ಗಲಾಟೆ ಪ್ರಕರಣ ಪೂರ್ವ ನಿಯೋಜಿತ ಕೃತ್ಯ. ಜಿಲ್ಲಾಡಳಿತದ ನಿರ್ಲಕ್ಷವೇ ಗಲಾಟೆಗೆ ಕಾರಣ ಎಂದು ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News