ಮಂಡ್ಯ : ಜಮೀನಿನ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಯುವಕನ್ನು ಬರ್ಬರವಾಗಿ  ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾರೇಕುರ ಗ್ರಾಮದ ಬಳಿ ನಡೆದಿದೆ. ಕಾರೇಕುರ ಗ್ರಾಮದ ಸಾಗರ್ (26) ಬರ್ಬರ ವಾಗಿ ಹತ್ಯೆಯಾದ ಯುವಕ ಎಂದು ಗುರುತಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಸ್ಕ್ರೂಡೈವರ್ ನಿಂದ ಚುಚ್ಚಿ ಕೊಲೆ.. ಬಾತ್ ರೂಂ ಪಿಟ್ ನಲ್ಲಿತ್ತು ಪತ್ನಿಯ ಶವ


ರಾತ್ರಿ ಮನೆಯಿಂದ ಹೊರ ಹೋಗಿದ್ದ ಯುವಕ ಬೆಳಿಗ್ಗೆ ಜಮೀನಿನ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಬರ್ಬರವಾಗಿ ಹತ್ಯೆಯಾಗಿರುವ ಯುವಕನೋರ್ವ ಹತ್ಯೆಯಾಗಿರೋ ಬಗ್ಗೆ ಪೊಲೀಸರಿಗೆ(Police) ಮಾಹಿತಿ ನೀಡಿದ್ದಾರೆ. ಸಧ್ಯ ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಸ್ಟೇಷನ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.