ಮೈಸೂರು ಕಾರ್ಪೋರೇಟರ್ ಪುತ್ರಿ ಆತ್ಮಹತ್ಯೆಗೆ ಶರಣು

   

Last Updated : Dec 2, 2017, 05:33 PM IST
ಮೈಸೂರು ಕಾರ್ಪೋರೇಟರ್ ಪುತ್ರಿ ಆತ್ಮಹತ್ಯೆಗೆ ಶರಣು title=

ಬೆಂಗಳೂರು : ವರದಕ್ಷಿಣೆ ಕಿರುಕುಳಕ್ಕೆ ಸಿಲಿಕಾನ್ ಸಿಟಿಯಲ್ಲಿ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಹೆಚ್.ಎಸ್.ಆರ್ ಲೇಔಟ್ನಲ್ಲಿ ಶುಕ್ರವಾರ ಸಂಜೆ ನಡೆದಿದೆ. 

ಮೈಸೂರು ಮಹಾನಗರಪಾಲಿಕೆ ಸದಸ್ಯ ನಾಗಭೂಷಣ್ ಅವರ ಪುತ್ರಿ ವನಿತಾ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ಕಳೆದ 7 ತಿಂಗಳ ಹಿಂದೆಯಷ್ಟೇ ತಮಿಳುನಾಡು ಮೂಲದ ವಸಂತ್ ಎಂಬುವರಿಗೆ ಈಕೆಯನ್ನು ಮದುವೆ ಮಾಡಿಕೊಡಲಾಗಿ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್‌ನಲ್ಲಿ ವಾಸವಿದ್ದರು. 

ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ವನಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ನಾಲ್ಕು ಪುಟಗಳ ಡೆತ್​ನೋಟ್​ ಕೂಡಾ ಬರೆದಿದ್ದಾರೆ. ಡೆತ್​ನೋಟ್​ನಲ್ಲಿ ಅತ್ತೆ ಗಾಯತ್ರಿ ಅವರು ತಂದೆ ಮನೆಯಿಂದ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ.

ಇನ್ನು, ನಿನ್ನೆ 8 ಗಂಟೆ ಸುಮಾರಿಗೆ ಗಂಡ ಮನೆಗೆ ಬಂದಾಗ ವಿಷಯ ಗೊತ್ತಾಗಿದೆ. ನಂತರ ಅವರು ಹೆಚ್.ಎಸ್.ಆರ್ ಲೇಔಟ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Trending News