ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಬಾರಿ ನಾಡಹಬ್ಬ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ‌ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಸೆಪ್ಟೆಂಬರ್ 26 ದಸರಾ ಆರಂಭ ಆಗಲಿದೆ. ಈ ಹಿನ್ನಲೆಯಲ್ಲಿ ‌ಯಾರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಸಭೆ ನಡೆದಿತ್ತು. ಸಭೆ ಬಳಿಕ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಇಂದು ಪತ್ರ ಬಂದಿದೆ. ಹೀಗಾಗಿ ಈ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.


ಇದನ್ನೂ ಓದಿ : ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ : ಬೊಮ್ಮಾಯಿ ಘೋಷಣೆ


ಸೆಪ್ಟೆಂಬರ್ 26 ರಂದು ಮೈಸೂರಿನಲ್ಲಿ ಆರಂಭವಾಗಲಿರುವ ದಸರಾ ಉತ್ಸವಕ್ಕೆ ಭರ್ಜರಿ ತಯಾರಿ  ನಡೆಯುತ್ತಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.