Illegal Alcohol, Gambling: ಚಾಮರಾಜನಗರ: ಒಂದೆಡೆ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮದ್ಯಕ್ಕೆ ದಾಸರಾಗುತ್ತಿದ್ದರೆ, ಮತ್ತೊಂದೆಡೆ ಜೂಜಾಟಕ್ಕೆ ಗುಲಾಮರಾಗಿ ಕೂಲಿ ಹಣವನ್ನು ಕಳೆಯುತ್ತಿದ್ದರು. ಇದನ್ನು ಹೀಗೆ ಬಿಟ್ಟರೆ ಮಕ್ಕಳ ಭವಿಷ್ಯವೇ ಹಾಳಾಗುತ್ತದೆ ಎಂದು ಮನಗಂಡ ಗ್ರಾಮಸ್ಥರು ದಿಟ್ಟ ನಿರ್ಧಾರ ಕೈಗೊಂಡು ದಂಡಾಸ್ತ್ರ ಪ್ರಯೋಗ ಮಾಡಿದ್ದಾರೆ.
ಹೌದು..., ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಎಂಬ ಊರಲ್ಲಿ ಅಕ್ರಮ ಮದ್ಯ ಮಾರಾಟಗಾರರಿಗೆ, ಕದ್ದುಮುಚ್ಚಿ ಜೂಜಾಟ ಆಡಿಸುತ್ತಿದ್ದವರಿಗೆ ಎಲ್ಲಾ ಸಮುದಾಯದ ಯಜಮಾನರು ಬಿಸಿ ಮುಟ್ಟಿಸಿದ್ದು ಮದ್ಯ ಮಾರಾಟ, ಜೂಜಾಟ ಕಂಡುಬಂದರೆ ಬರೋಬ್ಬರಿ 50 ಸಾವಿರ ದಂಡ ಕೊಡಬೇಕೆಂಬ ನಿರ್ಣಯ ಕೈಗೊಂಡಿದ್ದಾರೆ.
ಇದನ್ನೂ ಓದಿ- ಮಾದಪ್ಪನ ಬೆಟ್ಟದಲ್ಲಿ ರೂಂ ಬೇಕಾ!! ಮೊಬೈಲ್ ನಲ್ಲೇ ಬುಕ್ ಮಾಡಿ!!
ಗ್ರಾಮದ ದೊಡ್ಡಮ್ಮತಾಯಿ ದೇವಸ್ಥಾನದ ಮುಂಭಾಗ ಗುರುವಾರದಂದು (ಮೇ 22, 2025) ಸಭೆ ಸೇರಿ ಉಪ್ಪಾರ ಸಮುದಾಯ, ಪರಿಶಿಷ್ಟ ಜಾತಿ, ಮುಸ್ಲಿಂರು, ವಿಶ್ವಕರ್ಮ, ಕುರುಬ, ಕುಂಬಾರ, ಮಡಿವಾಳ ಹಾಗೂ ಸವಿತ ಸಮಾಜ ಸೇರಿದಂತೆ ಎಲ್ಲಾ ಕೋಮಿನ ಯಜಮಾನರು, ಸ್ವ ಸಹಾಯ ಮಹಿಳಾ ಸಂಘದವರು ಅಕ್ರಮ ಚಟುವಟಿಕೆಗಳು ಗ್ರಾಮದಲ್ಲಿ ನಡೆಯಬಾರದೆಂದು ಕಟ್ಟಾಜ್ಞೆ ಹೊರಡಿಸಿದ್ದಾರೆ.
ಗ್ರಾಮದ ಸುತ್ತಮುತ್ತಲಿನ ಸುಮಾರು 8ರಿಂದ 10 ಮಂದಿ ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿದ್ದ ಕಾರಣ ಬೆಳಗಿನ ಜಾವ 4 ಗಂಟೆಯಿಂದಲೇ ಯುವಕರು ಮದ್ಯ ಸೇವನೆಗೆ ಮುಂದಾಗುತ್ತಿದ್ದರು. ಕೆಲವರು ಕೂಲಿ ಕೆಲಸಕ್ಕೂ ಹೋಗದೆ ಕುಡಿತ ಮತ್ತಿನಲ್ಲಿ ರಸ್ತೆ ಬದಿ ಹಾಗೂ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದರು. ಇದಲ್ಲದೆ ಕೆಲಸಕ್ಕೆ ಹೋಗುವ ಹಲವು ಜನರು ಸಹ ಮದ್ಯ ಸೇವನೆ ಮಾಡಿಯೇ ತೆರಳುತ್ತಿದ್ದರು. ಇದರಿಂದ ದುಡಿದ ಹಣವೆಲ್ಲಾ ಪೋಲಾಗುತ್ತಿತ್ತು. ಅಷ್ಟೇ ಅಲ್ಲಡ್,ಎ ಗ್ರಾಮದ ನಾಲ್ಕೈದು ಕಡೆಗಳಲ್ಲಿ ಅಕ್ರಮ ಜೂಜಾಟವೂ ನಡೆಯುತ್ತಿತ್ತು. ಇದರಿಂದ ಗ್ರಾಮದ ಕೆಲ ಮಂದಿ ಹಗಲು ರಾತ್ರಿ ಎನ್ನದೆ ಜೂಜಾಟದಲ್ಲಿ ತೊಡಗಿದ್ದರಿಂದ ಗ್ರಾಮಸ್ಥರು ಈ ದಿಟ್ಟ ನಿಲುವು ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ- ರಾಜ್ಯದಲ್ಲಿ 61 ವಿಶ್ವದರ್ಜೆಯ ರೈಲು ನಿಲ್ದಾಣಗಳಾಗಿ ಅಭಿವೃದ್ಧಿಪಡಿಸಲು ಯೋಜನೆ
ಗ್ರಾಮದ ಎಲ್ಲಾ ಸಮುದಾಯದ ಜನರು ಒಗ್ಗೂಡಿ ಅಕ್ರಮ ಮದ್ಯ ಮಾರಾಟ ಹಾಗೂ ಜೂಜಾಟದ ವಿರುದ್ಧ ಸಮರ ಸಾರಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡಿದವರಿಗೆ 50 ಸಾವಿರ ರೂ. ದಂಡ, ಜೂಜಾಟ ಆಡಿಸುವವರಿಗೆ 50 ಸಾವಿರ ರೂ. ದಂಡ ಮತ್ತು ಅಕ್ರಮದ ಬಗ್ಗೆ ಮಾಹಿತಿ ಹಾಗೂ ಸಾಕ್ಷಿ ಹೇಳುವವರಿಗೆ 10 ಸಾವಿರ ರೂ. ಬಹುಮಾನ ನೀಡುವುದಾಗಿ ಟಾಂಟಾಂ ಮಾಡಿದ್ದಾರೆ.
ಗ್ರಾಮದ ಯುವಕರು, ವಯಸ್ಕರು ಕುಡಿತದ ಚಟ ಹಾಗೂ ಜೂಜಾಟಕ್ಕೆ ಬಿದ್ದು ಜೀವನ ಹಾಳು ಮಾಡಿಕೊಳ್ಳಬಾರದು ಎಂಬುದನ್ನು ನಿರ್ಧರಿಸಿ ಮುಂದಿನ ಭವಿಷ್ಯದ ದೃಷ್ಟಿಯಿಂದ ಈ ನಡೆ ಅನುಸರಿಸಲಾಗುತ್ತಿದೆ ಎಂದು ಯಜಮಾನರಾದ ಮಲೀಶೆಟ್ಟಿ, ಮಹದೇವಶೆಟ್ಟಿ, ಮಾದಶೆಟ್ಟಿ, ಕೃಷ್ಣಸ್ವಾಮಿ, ಗೋಪಾಲಶೆಟ್ಟಿ, ಸಿದ್ದಶೆಟ್ಟಿ, ಮಹಮ್ಮದ್ ಶೆಕ್ , ಸವಿತಾ ಸಮಾಜದ ಮುಖಂಡ ಸಿದ್ದರಾಜು ತಿಳಿಸಿದ್ದಾರೆ.
ಇನ್ನು, ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯದ ಪೌಚುಗಳನ್ನು ಸಭೆಯಲ್ಲೇ ಸುಟ್ಟು ಹಾಕಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.