ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಾಂಸ್ಕೃತಿಕ ನಗರಿಯಲ್ಲಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಮಲ್ಲಿಗೆ ನಗರಿ ಮೈಸೂರು ಪ್ರವಾಸದಲ್ಲಿರುವ ಶಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಮೈಸೂರಿನಲ್ಲಿ ಈ ಬಾರಿ ಬಿಜೆಪಿ ಉತ್ತಮ ಫಲಿತಾಂಶ ಕೊಡಲಿದೆ ಎಂದ ಶಾ, ಕರ್ನಾಟಕದ ಜನತೆ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಬದಲಾಯಿಸಬೇಕಿದೆ. ಹಲವು ವಿಚಾರಗಳಲ್ಲಿ ಸರ್ಕಾರದ ವಿರುದ್ಧ ಜನತೆಗೆ ಆಕ್ರೋಶವಿದೆ. ಈ ಆಕ್ರೋಶಗಳಲ್ಲಿ ಭ್ರಷ್ಟಾಚಾರ ಪ್ರಮುಖವಾಗಿದೆ ಎಂದು ತಿಳಿಸಿದರು.



ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ 24 ಗಂಟೆ ಕಾಲ ವಿದ್ಯುತ್ ಸೌಲಭ್ಯ ಒದಗಿಸಲಾಗುತ್ತಿದೆ. ಆದರೆ ಐಟಿ ಕೇಂದ್ರವಾದ ಬೆಂಗಳೂರಿಗೆ ಸರ್ಕಾರ 24 ಗಂಟೆ ವಿದ್ಯುತ್ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.  


ಓಬಿಸಿ ಕಲ್ಯಾಣಕ್ಕೆ ಸಾಕಷ್ಟು ಕೆಲಸ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಕಾಂಗ್ರೆಸ್ ಗೆ ಯಾಕೆ ಓಬಿಸಿ ಮಹತ್ವದ ಬಗ್ಗೆ ಸಿದ್ದರಾಮಯ್ಯ ತಿಳಿಸಿಕೊಟ್ಟಿಲ್ಲ. ಸಂಸತ್ತಿನಲ್ಲಿ ಮಸೂದೆ ಮಂಡನೆಗೆ ಯಾಕೆ ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ ಎಂದು ಇದೇ ಸಂದರ್ಭದಲ್ಲಿ ಪ್ರಶ್ನಿಸಿದರು.