ಎಲ್ಲರಿಗೂ ಬದುಕು ಕಟ್ಟಿ ಕೊಡುವುದು ನರೇಂದ್ರ ಮೋದಿಯವರ ಗ್ಯಾರೆಂಟಿ: ಬಸವರಾಜ ಬೊಮ್ಮಾಯಿ

ಎಲ್ಲರಿಗೂ ಸದೃಢ ಬದುಕು ಕಟ್ಟಿಕೊಡುವುದು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.  

Written by - Zee Kannada News Desk | Last Updated : Mar 30, 2024, 12:32 AM IST
  • ಎಲ್ಲರಿಗೂ ಸದೃಢ ಬದುಕು ಕಟ್ಟಿಕೊಡುವುದು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
  • ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ರಾಣೆಬೆನ್ನೂರಿನಲ್ಲಿ ಹಿಂದುಳಿದ ವರ್ಗಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
  • ಬೇರೆ ರಾಜ್ಯಗಳ ಪರಿಸ್ಥಿತಿ ಬೇರೆ ಇದೆ. ಕರ್ನಾಟಕದ ಚಿತ್ರಣ ನೋಡಿದರೆ ಇಲ್ಲಿನ ಜನರು ಬಹಳ ಪಬುದ್ಧರಿದ್ದಾರೆ.
ಎಲ್ಲರಿಗೂ ಬದುಕು ಕಟ್ಟಿ ಕೊಡುವುದು ನರೇಂದ್ರ ಮೋದಿಯವರ ಗ್ಯಾರೆಂಟಿ: ಬಸವರಾಜ ಬೊಮ್ಮಾಯಿ title=

ಅವರು ಇಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ರಾಣೆಬೆನ್ನೂರಿನಲ್ಲಿ ಹಿಂದುಳಿದ ವರ್ಗಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕದ ರಾಜಕಾರಣ ದೊಡ್ಡ ಪ್ರಮಾಣದಲ್ಲಿ ಬದಲಾವಣೆಯಾಗುತ್ತಿದೆ. ದೊಡ್ಡ ದೊಡ್ಡ ನಾಯಕರು. ಈ ರಾಜ್ಯವನ್ನು ನಡೆಸುವಂತಹ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿಗಳು ರಾಜಕೀಯ ಸಂಪೂರ್ಣ ತಮ್ಮ ಕಪಿಮುಷ್ಠಿಯಲ್ಲಿದೆ ಎಂದು ತಿಳಿದುಕೊಂಡಿದ್ದರು. ಇವತ್ತು ಅವರ ಕಪಿಮುಷ್ಠಿಯಿಂದ ಹೊರ ಬರುವ ಮೂಲಕ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದ್ದೀರಿ ಎಂದು ಹೇಳಿದರು.

ಅಧಿಕಾರದ ಮದದಿಂದ ಅವರಿಗೆ ಸಾಮಾನ್ಯ ಜನರು ಕಾಣಿಸುತ್ತಿಲ್ಲ. ಅವರಿಗೆ ಕೇವಲ ಹೊಗಳು ಭಟ್ಟರು ಮಾತ್ರ ಕಾಣಿಸುತ್ತಿದ್ದಾರೆ. ಈ ಚುನಾವಣೆ ಫಲಿತಾಂಶ ಹೊರ ಬಂದ ಮೇಲೆ ಅವರಿಗೆ ಸತ್ಯ ದರ್ಶನ ಆಗಲಿದೆ. ರಾಣೆಬೆನ್ನೂರಿನಲ್ಲಿ ಇಂದು ಹಿಂದುಳಿದ ವರ್ಗಗಳ ಜನರು ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಸೇರಿ ಈ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಪಣ ತೊಟ್ಟಿದ್ದಾರೆ. ನಾವು ಅವರನ್ನು ನಮ್ಮವರಾಗಿ ಗೌರವ ಪೂರಕವಾಗಿ ನಡೆಸಿಕೊಂಡು ಹೋಗುತ್ತೇವೆ ಎಂದರು.

ಇದನ್ನು ಓದಿ : ಮಿಂಚಿನ ಬಟ್ಟೆಯಲ್ಲಿ ಹೊಳೆಯುತ್ತಿರುವ ಸ್ಟಾರ್ ನಟಿ : ಫೋಟೋಸ್ ಇಲ್ಲಿವೆ 

ಬೇರೆ ರಾಜ್ಯಗಳ ಪರಿಸ್ಥಿತಿ ಬೇರೆ ಇದೆ. ಕರ್ನಾಟಕದ ಚಿತ್ರಣ ನೋಡಿದರೆ ಇಲ್ಲಿನ ಜನರು ಬಹಳ ಪಬುದ್ಧರಿದ್ದಾರೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ವ್ಯತ್ಯಾಸ ಗೊತ್ತಿದೆ. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿ ಇದ್ದಾಗ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಬೆಂಬಲ ಕೊಡಲಿಲ್ಲ. ಅವರು ರಾಜಿನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಿದಾಗ ರಾಮಕೃಷ್ಣ ಹೆಗಡೆಯವರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ನೀಡಿದ್ದರು. ಅದೇ ರೀತಿ 2013 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿದ್ದರು. ಆದರೆ, 2014 ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿಯವರಿಗೆ ಬೆಂಬಲ ನೀಡಿದ್ದರು.

 ಕಳೆದ ಹತ್ತು ವರ್ಷಗಳಲ್ಲಿ ವಿಶ್ವದಲ್ಲಿ ಭಾರತದ ಬಗೆಗಿನ ಅಭಿಪ್ರಾಯ ಸಾಕಷ್ಟು ಬದಲಾಗಿದೆ. ಆಗ ಎಲ್ಲೆಡೆ ಭಯೋತ್ಪಾದನೆ ಚಟುವಟಿಕೆ ಕೇಳಿ ಬರುತ್ತಿತ್ತು. ಮನಮೋಹನ್ ಸಿಂಗ್ ಅವರು ನಮ್ಮ ದೇಶದ ಮೇಲೆ ಬಾಂಬ್‌ ದಾಳಿಯಾದಾಗ ಪಾಕಿಸ್ತಾನಕ್ಕೆ ನಿಮ್ಮವರು ನಮ್ಮ ದೇಶದ ಮೇಲೆ ದಾಳಿ ಮಾಡಿದ್ದಾರೆ ಎಂದು ಪತ್ರ ಬರೆಯುತ್ತಿದ್ದರು. ಆದರೆ, ಮೋದಿಯವರು ಒಂದು ಸರ್ಜಿಕಲ್ ಸ್ಟೈಕ್ ಮಾಡಿ, ನಿಮ್ಮ ದೇಶದ ಒಳಗೆ ಬಂದು ಹೊಡೆಯುತ್ತೇವೆ ಎನ್ನುವ ಸಂದೇಶ ನೀಡಿದರು.

ಅಮೇರಿಕಾ, ಚೀನಾ ಸೇರಿದಂತೆ ಎಲ್ಲ ದೇಶಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಭಾರತದ ಆರ್ಥಿಕತೆ ಮಾತ್ರ ಶೇ 7 ರಷ್ಟು ಅಭಿವೃದ್ಧಿಯಾಗುತ್ತಿದೆ. ದೇಶದಲ್ಲಿ 8 ಲಕ್ಷ ಮನೆ ನೀಡಿದ್ದೇವೆ. ಎಲ್ಲ ಮನೆಗಳಿಗೂ ಶೌಚಾಲಯ, ಪತಿಯೊಬ್ಬರಿಗೂ ಅನ್ನ ನೀಡಿದ್ದೇವೆ. ಬದುಕನ್ನು ಕಟ್ಟಿ ಕೊಡುವುದು ನರೇಂದ್ರ ಮೋದಿಯವರ ಗ್ಯಾರಂಟಿ ಎಂದು ಹೇಳಿದರು.

ಕೊವಿಡ್ ಸಂದರ್ಭದಲ್ಲಿ ಮೋದಿಯವರು ಎಲ್ಲರಿಗೂ ಎರಡು ಬಾರಿ ಕೊವಿಡ್ ಲಸಿಕೆ ಕೊಡಿಸಿ ಎಲ್ಲರನ್ನು ರಕ್ಷಣೆ ಮಾಡಿದರು. ಹೀಗಾಗಿ ನಾವು ಈಗಲೂ ಆರೋಗ್ಯವಾಗಿದ್ದೇವೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ನಾವು ಅಧಿಕಾರದಲ್ಲಿದ್ದಾಗ ರಾಜ್ಯ ಸರ್ಕಾರದಿಂದ 4 ಸಾವಿರ ಕೋಡುತ್ತಿದ್ದೇವು ಅದನ್ನು ನಿಲ್ಲಿಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡದೇ 4 ಕೇವಲ ಸುಳ್ಳು  ಹೇಳುತ್ತಲೇ ಕಾಲ ಕಳೆಯುತ್ತಿದ್ದಾರೆ. ದನಕರುಗಳಿಗೆ ಮೇವು, ಕುಡಿಯಲು ನೀರಿಲ್ಲದೇ, ಉತ್ತರ ಕರ್ನಾಟಕ ಭಾಗದಲ್ಲಿ ಅರ್ಧ ರೇಟಿಗೆ ದನಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನು ಓದಿ : ಕವಿರತ್ನ ಡಾ||ವಿ.ನಾಗೇಂದ್ರಪ್ರಸಾದ್ ಅವರಿಂದ ಲೋಕಾರ್ಪಣೆಯಾಯಿತು "ಪಂಚೇಂದ್ರಿಯಂ" ಚಿತ್ರದ ಹಾಡುಗಳು ಹಾಗೂ ಟೀಸರ್ 

ನಾವು ವಿಧಾನಸೌಧದಲ್ಲಿ ಬಿಸಿಲೇರಿ ನೀರು ಕುಡಿದು ಬರಗಾಲದ ಬಗ್ಗೆ ಚರ್ಚೆ ಮಾಡುತ್ತೇವೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ವಾಸ್ತವಾಗಿ ಜನರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಅಲ್ಲಿ ಹೋಗಿ ನೋಡಿದಾಗ ವಾಸ್ತವ ಪರಿಸ್ಥಿತಿ ಅರ್ಥವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳಿದ್ದೇನೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಇದನ್ನು  ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಚುನಾವಣೆಯಲ್ಲಿ ಜನರ ಬಳಿ ಹೋಗುವುದು ಹೇಗೆ ಎಂದು ಅವರ ನಾಯಕರನ್ನು ಕೇಳಿದರೆ, ಗ್ಯಾರೆಂಟಿಗಳ ಬಗ್ಗೆ ಹೇಳಿ ಎಂದು ಅವರ ಶಾಸಕರಿಗೆ ಹೇಳುತ್ತಾರೆ. ಆದರೆ, ಅದನ್ನೂ ಕೂಡ ಎಲ್ಲರಿಗೂ ಸರಿಯಾಗಿ ನೀಡುತ್ತಿಲ್ಲ. ಮಹಿಳೆಯರು ಅಲೆದು ಅಲೆದು ಅವರ ಚಪ್ಪಲಿ ಸವೆಯುತ್ತಿವೆ. ಹಣ ಇಲ್ಲ ಎಂದು ಹೇಳುತ್ತಿರುವ ಇವರು 94 ಜನರಿಗೆ ಕ್ಯಾಬಿನೆಟ್ ದರ್ಜೆ ನೀಡಿ ಅನಗತ್ಯ ದುಂದು ವೆಚ್ಚ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹಿಂದುಳಿದ ವರ್ಗದವರಿಗೆ ಅನ್ಯಾಯ
ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಚುನಾವಣೆ ಘೋಷಣೆ ಆಗುವ ಮೊದಲು ತೆಗೆದುಕೊಂಡು ಅದನ್ನು ಜಾರಿ ಮಾಡುತ್ತೇವೆ ಎಂದು ಈಗ ವರದಿ ಪಡೆದು ಮೌನ ವಹಿಸಿದ್ದಾರೆ. ಈ ಮೂಲಕ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ. ಎಸ್ಸಿ ಎಸ್ಟಿ ಸಮುದಾಯದ ಹಣವನ್ನು ಗ್ಯಾರೆಂಟಿಗಳಿಗೆ ನೀಡುತ್ತಿದ್ದಾರೆ. ರೈತರ ಯೋಜನೆಗಳನ್ನು ಸ್ಥಗಿತಗೊಳಿಸಿದ್ದಾರೆ. ಇವರು ರೈತರು, ಎಸ್ಸಿ ಎಸ್ಟಿ. ಹಿಂದುಳಿದ ವರ್ಗಗಳ ವಿರೋಧಿಯಾಗಿದ್ದಾರೆ ಎಂದು ದೂರಿದರು.

ಮೋದಿ ಪ್ರಧಾನಿ ಮಾಡಲು ಮತ ಹಾಕಿ
ಕೊವಿಡ್ ನಲ್ಲಿ ಯಾರು ಲಸಿಕೆ ಪಡೆದಿದ್ದೀರಿ. ಯಾರ ಮನೆಗೆ ಉಜ್ವಲ ಗ್ಯಾಸ್ ಬಂದಿದೆ. ಯಾರ ಮನೆಗೆ ನಲ್ಲಿ ಬಂದಿದೆ. ಅವರೆಲ್ಲರೂ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಬಿಜೆಪಿಗೆ ಮತ ಹಾಕಬೇಕು. ನಮ್ಮ ಬದುಕನ್ನು ಸದೃಢ ಮಾಡಿಕೊಳ್ಳಲು ಬಿಜೆಪಿಗೆ ಮತ ಹಾಕಬೇಕು. ಜನ ಶಕ್ತಿಯಿಂದ ಮಾತ್ರ ಪ್ರಜಾಪ್ರಭುತ್ವ ಉಳಿಯಲಿದೆ. ನಿಮ್ಮ ಆಶೀರ್ವಾದದಿಂದ ನನ್ನ ಗೆಲುವು ಆಗುತ್ತದೆ. ಕಮಲಕ್ಕೆ ಮತ ಹಾಕುವ ಮೂಲಕ ಅತಿ ಹೆಚ್ಚು ಮತಗಳಿಂದ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು. ಈ ಚುನಾವಣೆ ಮುಗಿದ ತಕ್ಷಣವೇ ಮೆಡ್ಲೇರಿ ಕೆರೆಗೆ ನೀರು ಹರಿಸುವ ಕೆಲಸವನ್ನು ಪ್ರಮಾಣಿಕವಾಗಿ ಮಾಡುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬೈರತಿ ಬಸವರಾಜ್, ಬಿ.ಸಿ. ಪಾಟೀಲ್, ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾ‌ರ್ ಪೂಜಾರ್ ಹಾಗೂ ಅನೇಕ ಮುಖಂಡರು ಹಾಜರಿದ್ದರು. ಈ ಸಂದರ್ಭದಲ್ಲಿ  ಹಿಂದುಳಿದ ವರ್ಗಗಳ ಅನೇಕ ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News