Lok Sabha Election 2024: ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಕೇಂದ್ರದಲ್ಲಿ ಮತ್ತೊಮ್ಮೆ NDA ಸರ್ಕಾರ ರಚನೆಯಾಗುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.


COMMERCIAL BREAK
SCROLL TO CONTINUE READING

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನ್ನಡೆ ನೋಡಿದಾಗ ನಿರೀಕ್ಷೆಗಿಂತ ಕಡಿಮೆಯಾಗಿದೆ. ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ನಿರೀಕ್ಷತ ಮಟ್ಟಕ್ಕಿಂತ  ಕಡಿಮೆ ಇದೆ. ಆದರೆ NDA ಮೈತ್ರಿಕೂಟಕ್ಕೆ ಹೆಚ್ಚು ಸ್ಥಾನ ಸಿಗಲಿದೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಇದನ್ನೂ ಓದಿ: ಸಾಗರ್ ಖಂಡ್ರೆಗೆ ಅಭೂತ ಪೂರ್ವ ಗೆಲುವು : ಕಲ್ಯಾಣ ಕರ್ನಾಟಕ ಜನತೆಗೆ ಧನ್ಯವಾದ ಅರ್ಪಿಸಿದ ಈಶ್ವರ ಖಂಡ್ರೆ


ಕೆಲವು ರಾಜ್ಯದಲ್ಲಿ ನಿರೀಕ್ಷೆಗಿಂತ ಕಡಿಮೆ ಬಂದಿದ್ದನ್ನು ಒಪ್ಪಿಕೊಳ್ಳುತ್ತೇವೆ. ಹಿನ್ನಡೆಗೆ ಸ್ಥಳೀಯ ಕಾರಣಗಳು ಇರುತ್ತವೆ.. ಅವುಗಳ ವಿಶ್ಲೇಷಣೆ ಮಾಡುತ್ತೇವೆ. ಕೊರತೆಗಳನ್ನು ಸರಿಪಡಿಸಿಕೊಂಡು ಮೋದಿಯವರ ನೇತೃತ್ವದಲ್ಲಿ ದೇಶವನ್ನು ಮುನ್ನಡೆಸುತ್ತೇವೆ ಎಂದರು.


ರಾಜ್ಯದಲ್ಲಿ ಕಲ್ಯಾಣ ಕರ್ನಾಟಕದಲ್ಲೂ ಹಿನ್ನೆಡೆಯಾಗಿದೆ. ಬರುವ ದಿನದಲ್ಲಿ ವಿಶ್ಲೇಷಣೆ ಮಾಡುತ್ತೇವೆ. ಕರ್ನಾಟದಲ್ಲಿ ಇನ್ನೂ 4 ರಿಂದ 5 ಸ್ಥಾನ ಬರಬೇಕಿತ್ತು. ಆದರೆ ಅಲ್ಪ ಪ್ರಮಾಣದಲ್ಲಿ ಮೂರು ನಾಲ್ಕು ಸ್ಥಾನ ಕಳೆದುಕೊಂಡಿದ್ದೇವೆ ಎಂದು ಹೇಳಿದರು.


ಇದನ್ನೂ ಓದಿ: ಹಾವೇರಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡುತ್ತೇನೆ: ಗೆಲುವಿನ ಬಳಿಕ ಬೊಮ್ಮಾಯಿ ಹೇಳಿಕೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.