ಕಾರ್ಯಕರ್ತೆಯರಿಗಷ್ಟೇ ಪ್ರೋತ್ಸಾಹಧನ ಕೊಡಬೇಕಿದೆ: ಎಸ್..ಟಿ. ಸೋಮಶೇಖರ್

ಬೆಂಗಳೂರಿನ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳೀನ್ ಕುಮಾರ್ ಕಟೀಲ್ ಅವರ ಜೊತೆ ನಾನೂ ಸಹ ಚರ್ಚೆ ಮಾಡಿದ್ದೇನೆ. 

Last Updated : Aug 19, 2020, 01:09 PM IST
ಕಾರ್ಯಕರ್ತೆಯರಿಗಷ್ಟೇ ಪ್ರೋತ್ಸಾಹಧನ ಕೊಡಬೇಕಿದೆ: ಎಸ್..ಟಿ. ಸೋಮಶೇಖರ್ title=

ಮಾಲೂರು: ಕೊರೋನಾ ವಾರಿಯರ್ಸ್ ಗಳಿಗೆ ತಲಾ 3,000 ರೂಪಾಯಿ ಕೊಡಬೇಕೆಂಬ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಸೂಚನೆ ಮೇರೆಗೆ ಈಗಾಗಲೇ ಕಾರ್ಯನಿರತ 41,711 ಆಶಾ ಕಾರ್ಯಕರ್ತೆಯರಲ್ಲಿ ಬಹುತೇಕರಿಗೆ ಪ್ರೋತ್ಸಾಹಧನ ವಿತರಣೆ ಮಾಡಲಾಗಿದ್ದು, ಇನ್ನು ಸಾವಿರ ಮಂದಿಗಷ್ಟೇ ಬಾಕಿ ಇದೆ. ಅದೂ ಶೀಘ್ರದಲ್ಲಿ ಮುಗಿಯಲಿದೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ (ST Somashekhar) ತಿಳಿಸಿದರು.

ಸಹಕಾರ ಇಲಾಖೆ ವತಿಯಿಂದ ಅನೇಕ ಜನಪರ ಯೋಜನೆಗಳಿಗೆ ಚಾಲನೆ ನೀಡುವುದರ ಜೊತೆಗೆ ಸರ್ಕಾರಕ್ಕೂ ಬಲ ತುಂಬುವ ಕೆಲಸ ಮಾಡುತ್ತಿದ್ದು, ಮುಖ್ಯಮಂತ್ರಿಗಳ ಕೋವಿಡ್-19 (Covid 19) ಪರಿಹಾರ ನಿಧಿಗೆ 53 ಕೋಟಿ ರೂಪಾಯಿ ದೇಣಿಗೆಯನ್ನು ಎಪಿಎಂಸಿ ಹಾಗೂ ಸಹಕಾರಿ ಬ್ಯಾಂಕ್ ಗಳ ಮೂಲಕ ಸಂಗ್ರಹಿಸಿ ನೀಡಲಾಗಿದೆ ಎಂದು ಸಚಿವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. 

ಬೆಂಗಳೂರಿನ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳೀನ್ ಕುಮಾರ್ ಕಟೀಲ್ ಅವರ ಜೊತೆ ನಾನೂ ಸಹ ಚರ್ಚೆ ಮಾಡಿದ್ದೇನೆ. ಪ್ರಕರಣದ ಹಿಂದೆ ಯಾರಿದ್ದಾರೋ ಅವರ ಮೇಲೆ ಮುಲಾಜಿಲ್ಲದೆ ಕ್ರಮ ವಹಿಸಬೇಕು. ಜೊತೆಗೆ ಅಲ್ಲಿನ ಸ್ಥಿತಿ ಏನು ಎಂಬ ಬಗ್ಗೆ ಗೃಹಸಚಿವರಿಗೂ ಮಾಹಿತಿ ನೀಡಲಾಗಿದ್ದು, ಅವರು ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ. 

ಈಗಾಗಲೇ 350 ಮಂದಿಯನ್ನು ಬಂಧಿಸಲಾಗಿದೆ. ಗೃಹಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ‍ ಪರಿಗಣಿಸಿದ್ದಾರೆ. ಸಾರ್ವಜನಿಕ ಆಸ್ತಿಗೆ ಸಂಬಂಧಪಟ್ಟಂತೆ ಗಲಭೆಕೋರರಿಂದಲೇ ನಷ್ಟವನ್ನು ಭರಿಸಲಾಗುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಡಿ ಪಿ ಐ ಸಂಘಟನೆಯನ್ನು ನಿಷೇಧ ಮಾಡಬೇಕು ಎಂಬ ಬಗ್ಗೆ ಬಿಜೆಪಿ ಸೇರಿದಂತೆ ಸಾರ್ವಜನಿಕ ವಲಯದಲ್ಲಿ ಆಗ್ರಹಗಳು ಕೇಳಿಬರುತ್ತಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

Trending News