ಬೆಂಗಳೂರು : ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಹಿನ್ನೆಲೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ದಾರೆ. ನಗರ ಪೊಲೀಸ್ ಆಯುಕ್ತ ಸಿ.ಹೆಚ್.ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸುಬ್ರಮಣೇಶ್ವರ ರಾವ್, ಸಂದೀಪ್ ಪಾಟೀಲ್, ಡಿಸಿಪಿಗಳು ಭಾಗಿಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಹೊಸ ವರ್ಷಕ್ಕೆ ಬೆಂಗಳೂರು ಕೇಂದ್ರ ವಿಭಾಗದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಗಳಲ್ಲಿ ಹೆಚ್ಚಿನ ಜನಸಮೂಹ ಸೇರಲಿದ್ದು, ಕೈಗೊಳ್ಳಬೇಕಾದ ಅಗತ್ಯ ಭದ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಬೆಂಗಳೂರು ಕೇಂದ್ರ ವಿಭಾಗವೊಂದರಲ್ಲೇ 31 ಪಬ್, 5 ಡಿಸ್ಕೋಥೆಕ್, 26 ಲೇಡಿಸ್ ಬಾರ್, 13 ಕ್ಲಬ್ ಹಾಗೂ 71 ರೆಸ್ಟೋರೆಂಟ್ ಗಳಿದ್ದು ಅವುಗಳ ಮಾಲೀಕರಿಗೆ ನಿಯಮಾವಳಿಗಳ ಬಗ್ಗೆ ಚರ್ಚೆ ನಡೆಸಲಾಗಿದೆ‌.


ಇದನ್ನೂ ಓದಿ : ಚೆಲುವರಾಯಸ್ವಾಮಿ ಓರ್ವ ರಾಜಕೀಯ ಶಕುನಿ!: ಶಾಸಕ ಸುರೇಶ್‌ ಗೌಡ ಕಿಡಿ


ಹೊಸ ವರ್ಷಾಚರಣೆಯ ಮೇಲೆ ಉಗ್ರರ ಕಣ್ಣು ಬೀಳಬಹುದು ಎಂಬ ಗುಪ್ತಚರ ಇಲಾಖೆಯ ಮಾಹಿತಿಯನ್ವಯ ಈಗಾಗಲೇ ನಗರದ ವಿವಿಧ ಹೋಟೆಲ್, ಲಾಡ್ಜ್ ಗಳಲ್ಲಿ‌ ಬಂದು ನೆಲೆಸಿರುವವರ ಬಗ್ಗೆ ಮಾಹಿತಿ ಕಲೆಹಾಕುವಂತೆ ಎಲ್ಲಾ ವಿಭಾಗಗಳ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಇನ್ನೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ವರದಿಯಾದ ಉದಾಹರಣೆಗಳು ಸಹ ಇರುವುದರಿಂದ ಮಹಿಳೆಯರ ಭದ್ರತೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆಯೂ ಚರ್ಚಿಸಲ್ಪಟ್ಟಿದೆ.


ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕಿಕ್ಕೇರಿಸಲು ಈಗಾಗಲೇ ವಿಶಾಖಪಟ್ಟಣಂ, ಓಡಿಶಾ, ಅಸ್ಸಾಂನಿಂದ ಮಾದಕ ಪದಾರ್ಥಗಳು ನಗರ ಪ್ರವೇಶಿಸುವುದನ್ನ ತಡೆಯಲು ಸ್ಥಳೀಯ, ಅನ್ಯರಾಜ್ಯ ಹಾಗೂ ವಿದೇಶಿ ಮಾದಕ ದಂಧೆಕೋರರ ಮೇಲೆ ಖಾಕಿ‌ ಹದ್ದಿನ ಕಣ್ಣಿರಿಸಿದೆ.


ಸದ್ಯ ಕೊರೊನಾ ನಿಯಮಗಳನ್ನು ಪಾಲಿಸಿ ಕರ್ತವ್ಯ ನಿರ್ವಹಿಸುವಂತೆ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ಸೂಚಿಸುವ ಸಾಧ್ಯತೆ ಇದೆ. ಸರ್ಕಾರ ಹಾಗೂ ಆರೋಗ್ಯ ಇಲಾಖೆ ಯಾವ ರೀತಿ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡುತ್ತವೆ ಎಂಬುದನ್ನು ನೋಡಿ ಅವುಗಳನ್ನು ಅನುಷ್ಠಾನಕ್ಕೆ ತರಲು ಪೊಲೀಸ್ ಇಲಾಖೆ ನಿರ್ಧರಿಸಿದೆ.


ಇದನ್ನೂ ಓದಿ : ಕಾಂಗ್ರೆಸ್ ಮುಖಂಡನ ಮೇಲೆ ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರಿಂದ ಹಲ್ಲೆ ಆರೋಪ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.