ಬೆಂಗಳೂರು :ಬಿಜೆಪಿಗೆ ಸಿಪಿ ಯೋಗೇಶ್ವರ್ ರಾಜೀನಾಮೆ ಕೊಟ್ಟಿರುವುದರಲ್ಲಿ ಯಾವ  ಆಶ್ಚರ್ಯವೂ ಇಲ್ಲ. ಯಾವಾಗ ಅಷ್ಟು ತರಾತುರಿಯಲ್ಲಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರೋ ಆಗಲೇ ಅವರ ಮುಂದಿನ ನಡೆ ಏನು ಅನ್ನುವುದು ಗೊತ್ತಾಗಿತ್ತು. ಇದರಲ್ಲಿ ಆಶ್ಚರ್ಯಪಡುವಂಥದ್ದು ಏನೂ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಕಳೆದ ಎರಡು ತಿಂಗಳಿಂದ ನಿರಂತರವಾಗಿ ನನ್ನ ಹೆಸರು ಕೇಳಿ ಬರುತ್ತಿದೆ. ನಿಖಿಲ್ ಗೆ ಟಿಕೆಟ್ ಕೊಟ್ಟರೆ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ಕಾರ್ಯಕರ್ತರು ಹೇಳುತ್ತಿದ್ದರು. ಇಲ್ಲಿ ಯಾವುದೇ ತೀರ್ಮಾನಗಳು ಅಂತಿಮ ಆಗಬೇಕಾದರೆ  NDA ಕಡೆಯಿಂದ ಘೋಷಣೆ ಆಗಬೇಕು.ಕುಮಾರಸ್ವಾಮೀ ಕೂಡಾ ಇದನ್ನೇ ಹೇಳಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 


ಇದನ್ನೂ ಓದಿ : ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ : ಬಸವರಾಜ ಬೊಮ್ಮಾಯಿ ಸ್ಪಷ್ಟನೆ


ಕುಮಾರಸ್ವಾಮಿಯನ್ನೇ ಟಾರ್ಗೆಟ್ ಮಾಡುತ್ತಿರುವ ಕಾಂಗ್ರೆಸ್ : 
ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ 14 ಲೋಕಸಭೆ ಕ್ಷೇತ್ರಗಳಲ್ಲಿ 12 ಕ್ಷೇತ್ರವನ್ನು ಗೆದ್ದಿದ್ದೇವೆ. ಅದರಲ್ಲಿ ನಮ್ಮ ಕಾರ್ಯಕರ್ತರು ಮತ್ತು ಕುಮಾರಸ್ವಾಮಿ ಯವರದ್ದೇ ಪ್ರಮುಖ ಪಾತ್ರ. ಹಾಗಾಗಿ  ಕುಮಾರಸ್ವಾಮಿಯನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದರು.


ಬಿಜೆಪಿಯ ರಾಜ್ಯಮಟ್ಟದ ಒಕ್ಕಲಿಗರನ್ನು ಕುಮಾರಸ್ವಾಮಿ ತುಳಿತಾರೆ ಅನ್ನೋ ಮಾತಿನ ಬಗ್ಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ,ಇದರ ಹಿಂದೆ ಕುಮ್ಮಕ್ಕು ಕೊಟ್ಟವರು ಯಾರು ಅನ್ನುವವುದು ಪ್ರಸ್ತುತ ಬೆಳವಣಿಗೆ ನೋಡಿದರೆ ರಾಜ್ಯದ ಜನಕ್ಕೆ ಗೊತ್ತಾಗುತ್ತಿದೆ ಎಂದು ಕಿಡಿಕಾರಿದರು.


ಇದನ್ನೂ ಓದಿ : ನಟ ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ