ಮಂಡ್ಯ: ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯುಸನ್ ಗೆ ಅನುಮತಿ ನೀಡಿದರೂ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಮೂಡ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರ ಪಾತ್ರವೇನಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ  (Agriculture Minister Cheluvarayaswamy) ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ನಾಗಮಂಗಲದಲ್ಲಿಂದು ರಾಜ್ಯ ರಾಜಕೀಯ ಬೆಳವಣಿಗೆಗಳ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ (Agriculture Minister Cheluvarayaswamy), ಮೂಡಾ ವಿಚಾರದಲ್ಲಿ ಸಿಎಂ ಪಾತ್ರ ಇಲ್ಲ. ಅವರು ಕಾನೂನು ಬದ್ಧವಾಗಿಯೇ ನಿವೇಶನ ಪಡೆದುಕೊಂಡಿದ್ದಾರೆ. ಇದೆಲ್ಲಾ ನಡೆದಿರೋದು ಬಿಜೆಪಿ ಅವದಿಯಲ್ಲಿ ಹಾಗಾಗಿ ಅವರ ಮೇಲೆ ಕ್ರಮ‌ಕೈಗೊಳ್ಳಬೇಕು ಎಂದು ಹೇಳಿದರು. 


ಇದನ್ನೂ ಓದಿ- ಸಿಎಂಗೆ ನೀಡಿರುವ ಶೋಕಾಸ್ ನೋಟೀಸ್ ಹಿಂಪಡೆಯುವಂತೆ ಸಚಿವ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ: ಡಿಸಿಎಂ


ಈ ಹಿಂದೆ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಅವರ ವಿರುದ್ಧವೂ ಪ್ರಾಸಿಕ್ಯೂಶನ್ ಅನುಮತಿ ಕೇಳಲಾಗಿತ್ತು. ಆದರೆ ಅನುಮತಿ ನೀಡಿರಲಿಲ್ಲ. ಅವರಿಗೆ ಇಲ್ಲದೆ ಇರೋದು ಇದೀಗ ಸಿಎಂ ಸಿದ್ದರಾಮಯ್ಯಗೆ ಕೊಡ್ತಿರೋದು ರಾಜಕೀಯ ಪ್ರೇರಿತ ಎಂದು ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು. 


ಸಿಎಂ ಬದಲಾವಣೆ ಇಲ್ಲ: 
ಮೂಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರ (CM Siddaramaiah) ಪಾತ್ರವೇ ಇಲ್ಲದಿರುವಾಗ ಅವರ ಸ್ಥಾನಕ್ಕೆ ಹೇಗೆ ತೊಂದರೆಯಾಗುತ್ತದೆ. ರಾಜ್ಯದಲ್ಲಿ ಸಿಎಂ ಬದಲಾವಣೆಯ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಇದೇ ವೇಳೆ ಸ್ಪಷ್ಟಪಡಿಸಿದರು. 


ಇದನ್ನೂ ಓದಿ- ಸರ್ವೋಚ್ಚ ನ್ಯಾಯಾಲಯದ 'ಒಳಮೀಸಲಾತಿ' ತೀರ್ಪು ಐತಿಹಾಸಿಕ: ಸಿಎಂ ಸಿದ್ದರಾಮಯ್ಯ


ಇದೇ ಸಂದರ್ಭದಲ್ಲಿ ಬಿಜೆಪಿ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗೆಗೆ ನಾವು ಪ್ರಶ್ನೆ ಮಾಡ್ತಿವಿ ಎಂದರು. 


ಬಿ‌ಜೆ‌ಪಿ ಪಾದಯಾತ್ರೆಗೆ ಜೆ‌ಡಿ‌ಎಸ್ ಬೆಂಬಲ: 
ಬಿ‌ಜೆ‌ಪಿ ಪಾದಯಾತ್ರೆಗೆ ಜೆ‌ಡಿ‌ಎಸ್ ಬೆಂಬಲ ವಿಚಾರವಾಗಿಯೂ ಉತ್ತರಿಸಿ, ಅವರ ಜೊತೆಗೆ ಇದ್ದಾಗ ಬೆಂಬಲ ಕೊಡಬೇಕಲ್ವಾ. ಬೆಂಬಲ ಕೊಡದಿದ್ದರೆ ತೆಗಿತಾರೆ ಎಂಬ ಕಾರಣಕ್ಕೆ‌ ಜೆಡಿಎಸ್ ನವರು ಬೆಂಬಲ ಕೊಟ್ಟಿದ್ದಾರೆ ಎಂದವರು ಹೇಳಿದರು.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.