ಬೆಂಗಳೂರು: ಬಿಜೆಪಿ ಮಂಗಳೂರು ಚಲೋ ಸಮಾವೇಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಸಮಾವೇಶ ನಡೆಸುವುದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಬೈಕ್ ರ್ಯಾಲಿ ನಡೆಸಲು ಅನುಮತಿ ನೀಡಲಾಗುವುದಿಲ್ಲ ಎಂದಿದ್ದಾರೆ.


COMMERCIAL BREAK
SCROLL TO CONTINUE READING

ಅನುಮತಿ ಕೊಟ್ಟಿರುವ ಸ್ಥಳದಲ್ಲಿ ಸಭೆ ನಡೆಸದೆ ಬೇರೆ ಸ್ಥಳದಲ್ಲಿ ಸಭೆ ನಡೆಸಲು ತೀರ್ಮಾನಿಸಿರುವ ಬಿಜೆಪಿ ನಡೆಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರು ಪಾದಯಾತ್ರೆ ಮಾಡುತ್ತಿದ್ದಾರಾ? ಬೈಕ್ ರ್ಯಾಲಿ ಮಾಡೋಕೆ ಹೊರಟಿದ್ದಾರೆ. ಅವರು ಸಾಮರಸ್ಯ ಕಾಪಾಡುತ್ತಾರಾ? 
ಸಾಮರಸ್ಯ ಹಾಳುಮಾಡೋಕೆ ಹೊರಟಿದ್ದಾರೆ ಎಂದು ಹರಿಹಾಯ್ದಿದ್ದಾರೆ.