ಬೆಂಗಳೂರು: ಸಚಿವ ಸ್ಥಾನ ನಿಡುವ ಬಗ್ಗೆ ಮತ್ತು ಖಾತೆ ಹಂಚಿಕೆ ಜೆಡಿಎಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ, ಆದರೆ ಕಾಂಗ್ರೆಸ್ ಶಾಸಕರಲ್ಲಿ ಸಮಾಧಾನ ಇದ್ದು, ಅದನ್ನು ಅವರೇ ಸರಿಪಡಿಸಿಕೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಲ್ಲಿ ಇದೆಲ್ಲಾ ಮಾಮೂಲಿ. ಶಾಸಕ್ ಹೆಚ್.ವಿಶ್ವನಾಥ್ ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡಿಲ್ಲ. ಬೆಳಿಗ್ಗೆ ತಾನೇ ನನ್ನೊಂದಿಗೆ ತಿಂಡಿ ಮಾಡಿದರು. ಇನ್ನು ಕೆಲವರಲ್ಲಿ ಅಸಮಾಧಾನ ಇದೆ. ಅದನ್ನು ನಾವು ಸರಿಪಡಿಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.


ಮತ್ತೊಂದೆಡೆ, ಬಾದಾಮಿ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಮಾತನಾಡಿ, "ಸಚಿವ ಸ್ಥಾನ ಸಿಗದ ಬಗ್ಗೆ ಅಸಮಾಧಾನ ಇರೋದು ನಿಜ, ಎಲ್ಲರನ್ನು ಮನವೊಲಿಸುತ್ತೇವೆ. ಸಚಿವ ಸ್ಥಾನದ ಆಕಾಂಕ್ಷಿ ಎಂ.ಬಿ.ಪಾಟೀಲ್ ನನ್ನನ್ನು ಭೇಟಿಯಾಗಿದ್ದು ನಿಜ, ಆದರೆ ಕಣ್ಣೀರು ಹಾಕಿಲ್ಲ. ನಾನು ಅವರನ್ನು ಸಮಾಧಾನ ಮಾಡಿದ್ದೇನೆ" ಎಂದು ತಿಳಿದರು.