ಅನುದಾನ ಬರ್ತಿಲ್ಲ, ನಂ ಸಂಬಳ ಮುಂದಕ್ಕೇನೋ ಆಗತ್ತೋ: ಯಳಂದೂರು ತಹಶಿಲ್ದಾರ್ ಅಳಲು

Karnataka: ಚಾಮರಾಜನಗರ ಜಿಲ್ಲೆಯ ಯಳಂದೂರು ತಹಶಿಲ್ದಾರ್  ಇಂದು ನಡೆದ ಸವಿತಾ ಮಹರ್ಷಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಸರ್ಕಾರವನ್ನು ದೂಷಿಸುವುದು ಸರಿಯಲ್ಲ, ಸರಳವಾಗಿ ಆಚರಿಸಿ ಮಹನೀಯರಿಗೆ ಗೌರವಿಸೋಣ ಎಂದಿದ್ದಾರೆ.

Written by - Zee Kannada News Desk | Last Updated : Feb 8, 2024, 02:06 PM IST
  • ಸಭೆಯಲ್ಲಿ ಸವಿತಾ ಸಮುದಾಯದ ಮುಖಂಡರು ಮಾತನಾಡಿ, ಸವಿತಾ ಮಹರ್ಷಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಬೇಕು ಎಂದರು.
  • ತಹಶಿಲ್ದಾರ್ ಜಯಪ್ರಕಾಶ್ ಮಾತನಾಡಿ, ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ, ಸರಳವಾಗಿ ಆಚರಿಸಿ ಮಹನೀಯರಿಗೆ ಗೌರವಿಸೋಣ ಎಂದಿದ್ದಾರೆ.
  • ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಅನುದಾನ ಬರ್ತಿಲ್ಲ, ನಂ ಸಂಬಳ ಮುಂದಕ್ಕೇನೋ ಆಗತ್ತೋ: ಯಳಂದೂರು ತಹಶಿಲ್ದಾರ್ ಅಳಲು title=

ಚಾಮರಾಜನಗರ: ಅನುದಾನ ಕೊರತೆ ಎಂದು ಚಾಮರಾಜನಗರ ಜಿಲ್ಲೆಯ ಯಳಂದೂರು ತಹಶಿಲ್ದಾರ್ ಅಳಲು ತೋಡಿಕೊಂಡ ಘಟನೆ ಇಂದು ನಡೆದಿದೆ‌.

ಯಳಂದೂರಿನ ತಹಶಿಲ್ದಾರ್ ಕಚೇರಿಯಲ್ಲಿ ಇಂದು ಸವಿತಾ ಮಹರ್ಷಿ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಸವಿತಾ ಸಮುದಾಯದ ಮುಖಂಡರು ಮಾತನಾಡಿ, ಸವಿತಾ ಮಹರ್ಷಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಬೇಕು, ಕಾಟಾಚಾರದ ಜಯಂತಿ ಆಚರಣೆ ಮಾಡುವುದು ಸರಿಯಲ್ಲ, ಮಹನೀಯರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಬೇಕು ಎಂದರು.

ಇದನ್ನೂ ಓದಿ: ಅಸಮಾನತೆ ನಿವಾರಣೆಗೆ ಗ್ಯಾರಂಟಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ

ಇದಕ್ಕೆ ಪ್ರತಿಕ್ರಿಯಿಸಿದ, ತಹಶಿಲ್ದಾರ್ ಜಯಪ್ರಕಾಶ್ ಮಾತನಾಡಿ, ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ, ನಂ ಸಂಬಳದ ಕಥೆ ಮುಂದೆ ಏನಾಗತ್ತೋ ಗೊತ್ತಿಲ್ಲ, ಸರ್ಕಾರವನ್ನು ದೂಷಿಸುವುದು ಸರಿಯಲ್ಲ, ಸರಳವಾಗಿ ಆಚರಿಸಿ ಮಹನೀಯರಿಗೆ ಗೌರವಿಸೋಣ ಎಂದಿದ್ದಾರೆ.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಮೃತೇಶ್, ಸವಿತಾ ಸಮಾಜ ಮುಖಂಡರಾದ ರಾಮಣ್ಣ, ಪಟ್ಟಣ ಪಂಚಾಯತಿ ಸದಸ್ಯರಾದ ಮಹೇಶ್ ರಂಗನಾಥ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News