ಕುಮಾರಸ್ವಾಮಿಯಿಂದ ನಾನು ರಾಜಕೀಯ ಪಾಠ ಕಲಿಯಬೇಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

Last Updated : Mar 10, 2018, 03:44 PM IST
ಕುಮಾರಸ್ವಾಮಿಯಿಂದ ನಾನು ರಾಜಕೀಯ ಪಾಠ ಕಲಿಯಬೇಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ title=

ಮೈಸೂರು: ಜೆಡಿಎಸ್​ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಂದ ನಾನು ರಾಜಕೀಯ ಪಾಠ ಕಲಿಯುವ ಅಗತ್ಯವಿಲ್ಲ. ಅವರು ರಾಜಕೀಯಕ್ಕೆ ಬರುವುದಕ್ಕೂ ಮೊದಲೇ ನಾನು ಮಂತ್ರಿಯಾಗಿದ್ದೆ ಎಂದು  ಸಿದ್ದರಾಮಯ್ಯ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಇಲ್ಲಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಅಧಿಕಾರಿಗಳ ಜತೆ ಹೇಗೆ ವರ್ತಿಸಬೇಕು, ಅಧಿಕಾರಿಗಳಿಂದ ಹೇಗೆ ಕೆಲಸ ಮಾಡಿಸಬೇಕು ಎಂಬುದನ್ನು ಕುಮಾರಸ್ವಾಮಿ ಅವರಿಂದ ನಾನು ಕಲಿಯಬೇಕಿಲ್ಲ. ಕುಮಾರಸ್ವಾಮಿಯವರು ರಾಜಕೀಯಕ್ಕೆ ಬರುವ ಮೊದಲೇ ನಾನು ಮಂತ್ರಿಯಾಗಿದ್ದೆ. ಚುನಾವಣೆ ಸಮೀಪಿಸುತ್ತಿರುವಾಗ ಕುಮಾರಸ್ವಾಮಿಯವರು ಏನೇನೋ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಕುಟುಕಿದರು. 

ನಿನ್ನೆಯಷ್ಟೆ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದ ಕೆಲವು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

Trending News