"ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ"

ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆ ತೆಗೆದುಕೊಳ್ಳಲು ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Written by - Manjunath N | Last Updated : Jan 15, 2024, 04:23 PM IST
  • ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆ ಮೇಲೆ ದೌರ್ಜನ್ಯ ನಡೆದಾಗ ಗೃಹ ಸಚಿವರು ಭೇಟಿ ನೀಡಿದ್ದರು.
  • ಇಲ್ಲಿ ಗೃಹ ಸಚಿವರು ಇರಲಿಲ್ಲ. ಕೇಂದ್ರದ ಮಾಜಿ ಸಚಿವ ಶಿವಣ್ಣ ಭೇಟಿ ನೀಡಿದ್ದಾರೆ
  • ಸಂತ್ರಸ್ತೆಯನ್ನು ಭೇಟಿ ಮಾಡಿ ಸಾಂತ್ವನ ಹೇಳುವುದು ಒಂದು ಭಾಗವಾದರೆ, ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ.
 "ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ" title=
file photo

ಹಾವೇರಿ: ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆ ತೆಗೆದುಕೊಳ್ಳಲು ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಅವರು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಇದನ್ನೂ ಓದಿPhoto Gallery: ಪ್ರಧಾನಿ ಮೋದಿಯಿಂದ ದೇಶದ ಅತೀ ಉದ್ದದ ಅಟಲ್ ಸೇತುವೆ ಲೋಕಾರ್ಪಣೆ!

ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ.ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆ ತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ.ಎಸ್.ಐ.ಟಿ ನಲ್ಲಿರುವವವರೂ ಪೊಲೀಸರೇ. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆ ಮೇಲೆ ದೌರ್ಜನ್ಯ ನಡೆದಾಗ ಗೃಹ ಸಚಿವರು ಭೇಟಿ ನೀಡಿದ್ದರು. ಭೇಟಿ ನೀಡುವಂತೆ ನಾನೇ ಸೂಚನೆ ನೀಡಿದ್ದೆ. ಇಲ್ಲಿ ಗೃಹ ಸಚಿವರು ಇರಲಿಲ್ಲ. ಕೇಂದ್ರದ ಮಾಜಿ ಸಚಿವ ಶಿವಣ್ಣ ಭೇಟಿ ನೀಡಿದ್ದಾರೆ.ಸಂತ್ರಸ್ತೆಯನ್ನು ಭೇಟಿ ಮಾಡಿ ಸಾಂತ್ವನ ಹೇಳುವುದು ಒಂದು ಭಾಗವಾದರೆ, ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ.ಎರಡನ್ನೂ ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ದೆಹಲಿ ಪೊಲೀಸ್ ಅಪರಾಧ ವಿಭಾಗದ ಮೊದಲ ಮಹಿಳಾ ಮುಖ್ಯಸ್ಥೆ ಶಾಲಿನಿ ಸಿಂಗ್ ಯಾರು?

ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು.ರೈತರರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿದ್ದಾರೆ. ರೈತರಿಗೆ 2,000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಎನ್.ಡಿ.ಆರ್.ಎಫ್ ನಡಿ ಬರ ಪರಿಹಾರ ಬಂದ ನಂತರ ಪುನಃ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಅನಂತಕುಮಾರ್ ಹೆಗಡೆಯವರು ಮುಖ್ಯಮಂತ್ರಿ ಹುದ್ದೆಯಲ್ಲಿರುವ ವ್ಯಕ್ತಿಗೆ ಏಕವಚನದಲ್ಲಿ ಮಾತನಾಡುವುದನ್ನು ಸಮರ್ಥಿಸಿಕೊಂಡಿದ್ದಾರೆ. ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ, ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ? ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯತ್ವ ಇರಬೇಕು ಎಂದು ಕಿಡಿ ಕಾರಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News