ಬೆಂಗಳೂರು: ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಪಿಕರ್ ರಮೇಶ್ ಕುಮಾರ್ ಅವರು, ನನಗೆ ಯಾರೂ ರಾಜಿನಾಮೆ ಕೊಟ್ಟಿಲ್ಲ, ಅದರ ಬಗ್ಗೆ ನನಗೆ ಮಾಹಿತಿಯೂ ಇಲ್ಲ ಎಂದು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ಸುದ್ದಿ ಎಲ್ಲೆಡೆ ಹರಡುತ್ತಿದ್ದಂತೆಯೇ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ಮಾಧ್ಯಮದವರಿಗೆ "ನನಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ನವರಾಗಲೀ ಅಥವಾ ಬಿಜೆಪಯಾವರಾಗಲೀ ಯಾರು ರಾಜೀನಾಮೆ ನೀಡಿದರೆ ನನಗೇನು? ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ" ಎಂದು ರಮೇಶ್ ಕುಮಾರ್ ಹೇಳಿದ್ದಾರೆ.


"ಅಷ್ಟಕ್ಕೂ ನಿನ್ನೆ ರಾತ್ರಿಯಿಂದ ನಾನು ಮನೆಯಲ್ಲಿಯೇ ಇದ್ದೇನೆ. ಎಲ್ಲೂ ಹೋಗಿಲ್ಲ. ನನ್ನ ಬಳಿ ಯಾರೂ ಬಂದಿಲ್ಲ. ಒಬ್ಬರಲ್ಲ ಇಪ್ಪತ್ತು ಮಂದಿ ಬಂದು ರಾಜೀನಾಮೆ ಕೊಟ್ರೂ ನಾನು ಸ್ವೀಕರಿಸುತ್ತೇನೆ. ಆದ್ರೆ ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಗೊಂದಲ ಮೂಡಿಸಿದ್ದಾರೆ.