ಬೆಂಗಳೂರು: ಪಕ್ಷೇತರ ಶಾಸಕರು ಬಿಜೆಪಿಗೆ ಬೆಂಬಲ ಕೊಟ್ಟಿರುವ ಬಗ್ಗೆ ನಮಗೇನೂ ಅಭ್ಯಂತರವಿಲ್ಲ ಎಂದು ಡಿಸಿಎಂ ಜಿ.ಪರಮೇಶ್ವರ್ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಇಬ್ಬರು ಪಕ್ಷೇತರ ಶಾಸಕರು ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡದಿರುವ ಬಗ್ಗೆ ರಾಜ್ಯಪಾಲರಿಗೆ ಪತ್ರ ರವಾನಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷೇತರ ಶಾಸಕರಾದ ಆರ್​​.ಶಂಕರ್ ಹಾಗೂ ಹೆಚ್​.ನಾಗೇಶ್​ ಸಮ್ಮಿಶ್ರ ಸರ್ಕಾರದಿಂದ ಬೆಂಬಲ ಹಿಂಪಡೆದಿರುವುದಕ್ಕೆ ಕಾರಣ ಏನು ಎಂಬುದು ನಮಗೆ ಗೊತ್ತಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ. 


ಮುಂದುವರೆದು ಮಾತಂಡಿದ ಅವರು, ಬಿಜೆಪಿಯವರು ಅಧಿಕಾರದ ಆಸೆ, ಆಮಿಷವೊಡ್ಡಿ ಸರ್ಕಾರವನ್ನು ಬಿಳಿಸಲು ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದ್ದಾರೆ. ಈ ವಿಚಾರ ಇಡೀ ದೇಶಕ್ಕೇ ಗೊತ್ತಿದೆ. ನಮ್ಮ ಸರ್ಕಾರ ಯಾವುದೇ ಕಾರಣಕ್ಕೆ ಅಸ್ಥಿರ ಆಗೋದಿಲ್ಲ, ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಬೆಲೆ ಎಂದು ಹೇಳಿದರು.