ಶುಕ್ರವಾರ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದ ಹೊಸಪೇಟೆಯ ಬಿಜೆಪಿ ಶಾಸಕ ಆನಂದ್ ಸಿಂಗ್ ಗೆ ಬಿಜೆಪಿ ಶಿಸ್ತು ಸಮಿತಿ ನೋಟೀಸ್ ಜಾರಿಗೊಳಿಸಿದೆ.


COMMERCIAL BREAK
SCROLL TO CONTINUE READING

ಶಾಸಕ ಆನಂದ್ ಸಿಂಗ್ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಲ್ಲದೆ 'ಟಿಪ್ಪು ಜಯಂತಿ' ಆಚರಣೆಯನ್ನು ಬಹಿರಂಗವಾಗಿ ಸಮರ್ಥಿಸಿಕೊಂಡ ಕಾರಣ, ಬಿಜೆಪಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷರಾದ ಶ್ರೀ ಎನ್.ಶಂಕರಪ್ಪ ಆನಂದ್ ಸಿಂಗ್ ಅವರಿಗೆ ನೋಟಿಸ್ ನೀಡಿ, ಏಳು ದಿನಗಳೊಳಗೆ ಈ ಸಂಬಂಧ ವಿವರಣೆ ನೀಡಬೇಕೆಂದು ಸೂಚಿಸಿದ್ದಾರೆ.


ಹೊಸಪೇಟೆಯಲ್ಲಿ ಟಿಪ್ಪು ಜಯಂತಿ ಆಚರಣೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಆನಂದ್ ಸಿಂಗ್ 'ಟಿಪ್ಪು ಜಯಂತಿ ಆಚರಣೆ ಕುರಿತು ರಾಜ್ಯದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ನಾನು ಪ್ರತಿನಿಧಿಸುವ ಪಕ್ಷ ಸಹ ವಿರೋಧಿಸುತ್ತಿದೆ. ಆದರೆ, ಅದರ ಬಗ್ಗೆ ನಾನು ಚಿಂತಿಸುವುದಿಲ್ಲ. ನನಗೆ ನನ್ನ ಕ್ಷೇತ್ರದ ಜನತೆಯೇ ಮುಖ್ಯ. ಸಮುದಾಯಗಳನ್ನು ಒಡೆದು ರಾಜಕೀಯ ಮಾಡುವುದು ಸರಿಯಲ್ಲ. ಎಲ್ಲಾ ಧರ್ಮಗಳಿಗಿಂತ ಮನುಷ್ಯ ಧರ್ಮ ಮುಖ್ಯ' ಎಂದು ಹೇಳಿಕೆ ನೀಡಿದ್ದರು.