Bangalore Flood : ರಾಜಕಾಲುವೆ ಒತ್ತುವರಿ ಮಾಡಿದ್ದ 30 ಸಂಸ್ಥೆಗಳಿಗೆ ನೋಟಿಸ್

Bangalore Flood : ಸರ್ಕಾರ 30 ಐಟಿ ಬಿಟಿ ಸಂಸ್ಥೆಗಳಿಗೆ ರಾಜಕಾಲುವೆ ಒತ್ತುವರಿ ಆರೋಪಕ್ಕೆ ನೋಟಿಸ್ ನೀಡಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು.

Written by - Prashobh Devanahalli | Last Updated : Sep 12, 2022, 05:23 PM IST
  • ರಾಜಕಾಲುವೆ ಒತ್ತುವರಿ ಮಾಡಿದ್ದ 30 ಸಂಸ್ಥೆಗಳಿಗೆ ನೋಟಿಸ್
  • ಕೋರ್ಟ್ ಕೂಡ ಒತ್ತುವರಿ ತೆರವು ಮಾಡಿ ಅಂತಲೇ ಸೂಚನೆ ನೀಡಿದೆ
  • ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ
Bangalore Flood : ರಾಜಕಾಲುವೆ ಒತ್ತುವರಿ ಮಾಡಿದ್ದ 30 ಸಂಸ್ಥೆಗಳಿಗೆ ನೋಟಿಸ್ title=
ರಾಜಕಾಲುವೆ ಒತ್ತುವರಿ

ಬೆಂಗಳೂರು: ಇತ್ತೀಚಿಗೆ ನಗರದ ಬೆಳ್ಳಂದೂರು, ಮಾರತ್ತಹಳ್ಳಿ ಸೇರಿದಂತೆ ಹಲವು ಬಡಾವಣೆಗಳಲ್ಲಿ ರಾಜಕಾಲುವೆ ಒತ್ತುವರಿ ಕಾರಣದಿಂದ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು ಎಂಬ ಆರೋಪಕಕ್ಕೆ ಸರ್ಕಾರ 30 ಐಟಿ ಬಿಟಿ ಸಂಸ್ಥೆಗಳಿಗೆ ರಾಜಕಾಲುವೆ ಒತ್ತುವರಿ ಆರೋಪಕ್ಕೆ ನೋಟಿಸ್ ನೀಡಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು.

ಇದನ್ನೂ ಓದಿ: Video : ಟ್ರಾಫಿಕ್‌ನಲ್ಲಿ ಸಿಲುಕಿದ ಕಾರು, ರೋಗಿಯ ಜೀವ ಉಳಿಸಲು 3 ಕಿಮೀ ಓಡಿದ ಡಾಕ್ಟರ್!

ವಿಧಾನಸಭೆ ಕಲಾಪದ ಬಳಿಕ ಮಾತಾನ್ನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಾರು ರಾಜಕಾಲುವೆ ಒತ್ತುವರಿ ಮಾಡಿದ್ದಾರೆ ಸಹಜ ಕಾಲುವೆಗೆ ಯಾರೇ ಅಡ್ಡಿ ಬಂದರೂ ತೆರವು ಸೂಚನೆ ನೀಡಿದ್ದೇವೆ.ಅದರಲ್ಲಿ ಹಿಂದೆ ಸರಿಯುವ ಮಾತೇ ಇಲ್ಲ,ಎಲ್ಲರಿಗೂ ಕೂಡ ಮಳೆಯಿಂದ ತೊಂದರೆ ಆಗಿದೆ. ತೆರವು ಮಾಡುವುದು ಪ್ರಾರಂಭ ಆಗಿದೆ ನಿಲ್ಲೋದಿಲ್ಲ,ಎಂದು ಭರವಸೆ ನೀಡಿದರು.

ಹಲವಾರು ಪ್ರಕರಣ ಕೋರ್ಟ್ ನಲ್ಲಿ ಈಗಾಗಲೇ ಇದೆ.ಕೋರ್ಟ್ ಕೂಡ ಒತ್ತುವರಿ ತೆರವು ಮಾಡಿ ಅಂತಲೇ ಸೂಚನೆ ನೀಡಿದೆ.ಈ ಬಾರಿ ನಾವು ನಿಲ್ಲಿಸೋದಿಲ್ಲ, ತೆರವು ಮಾಡಿಯೇ ಮಾಡ್ತೇವೆ.ಮಳೆಯಿಂದಾಗಿ ಐಟಿಬಿಟಿಯವರಿಗೂ ತೊಂದರೆ ಆಗಿದೆ, ರಸ್ತೆಯಲ್ಲಿ ಓಡಾಡುವವರಿಗೂ ತೊಂದರೆ ಆಗಿದೆ, ಸಾಮಾನ್ಯರಿಗೂ ತೊಂದರೆ ಆಗಿದೆ.ನಿಲ್ಲಿಸುವ ಪ್ರಶ್ನೆಯೇ ಇಲ್ಲ, ಎಂದರು.

ಇದನ್ನೂ ಓದಿ: ಬೆಂಗಳೂರಿನ ಕೆರೆ-ಕಟ್ಟೆಗಳ ಡಿ-ನೋಟಿಫಿಕೇಶನ್‍ಗೆ ಸಿದ್ದರಾಮಯ್ಯ ಸಂಪುಟ ಅನುಮೋದನೆ ನೀಡತ್ತು: ಬಿಜೆಪಿ

ಇದೆ ಸಂದರ್ಭದಲ್ಲಿ ಮಾತಾನ್ನಾಡಿದ ಸಿಎಂ,ಬಸವರಾಜ ದಡೆಸಗೂರು ಆಡಿಯೋ ವೀಡಿಯೋ ಪ್ರಕರಣ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಆಡಿಯೋ ವೀಡಿಯೋ ಬಗ್ಗೆ ಗೊತ್ತಿಲ್ಲ ಆದರೆ ಆ ಬಗ್ಗೆ ಪರಿಶೀಲನೆ ಮಾಡ್ತೇವೆ.ಹಂಗೇನಾದ್ರೂ ಇದ್ರೆ ತನಿಖೆ ಮಾಡುತ್ತೇವೆ, ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News