ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಭೂಮಿ ಮೇಲ್ವಿಚಾರಣಾ ಕೋಶ ಸಿದ್ಧಪಡಿಸಿರುವ ಸಾಲ ಮನ್ನಾ ತಂತ್ರಾಂಶಕ್ಕೆ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ಮನ್ನಾ ಕುರಿತ ದತ್ತಾಂಶವನ್ನು ನೀಡುವಂತೆ ತಿಳಿಸಿ ಭೂ ಮಾಪನ ಮತ್ತು  ಭೂ ದಾಖಲೆಗಳ ಇಲಾಖೆ ಆಯುಕ್ತ ಮುನೀಶ್ ಮೌದ್ಗಿಲ್ ಬ್ಯಾಂಕುಗಳಿಗೆ ಪತ್ರ ಬರೆದಿದ್ದಾರೆ. 



COMMERCIAL BREAK
SCROLL TO CONTINUE READING

ಬ್ಯಾಂಕುಗಳಿಂದ ಮಾಹಿತಿ ಪಡೆದ ಕೂಡಲೇ, ಸಾಲ ಮನ್ನಾ ಹಣವನ್ನು ಬ್ಯಾಂಕುಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿರುವ ಮುಖ್ಯಮಂತ್ರಿಗಳು, ಸಾಲ ಮರುಪಾವತಿಸುವಂತೆ ರೈತರಿಗೆ ಕಿರುಕುಳ ನೀಡಬಾರದು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.