ಆ.30 ರಂದು ಗೃಹಲಕ್ಷ್ಮಿಯೋಜನೆಯ ಚಾಲನಾ ಅದ್ದೂರಿ ಕಾರ್ಯಕ್ರಮ..!

ಮನೆಯ ಯಜಮಾನಿಯು ಕಾರ್ಯಕ್ರಮದ ದಿನದಂದು ಅವರ ಮನೆಯ ಮುಂದೆ ರಂಗೋಲಿ ಹಾಕಬೇಕು. ಮನೆಯ ಮುಂದೆ ರಂಗೋಲಿಯಲ್ಲಿ 'ನಾನು ಗೃಹಲಕ್ಷ್ಮೀ, ಮನೆಯ ಯಜಮಾನಿ' ಎಂದು ಬರೆಯುವಂತೆ ಸಚಿವ ಬಿ.ನಾಗೇಂದ್ರ ತಿಳಿಸಿದರು.

Written by - Prashobh Devanahalli | Edited by - Krishna N K | Last Updated : Aug 27, 2023, 07:30 PM IST
  • ಗೃಹಲಕ್ಷ್ಮಿ ಯೋಜನೆಯು ಆ.30 ರಂದು ರಾಜ್ಯ ಮಟ್ಟದ ಚಾಲನೆ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದೆ.
  • ಪ್ರತಿಯೊಂದು ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಹಿಳೆಯರು ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.
  • ಮನೆಯ ಯಜಮಾನಿಯು ಕಾರ್ಯಕ್ರಮದ ದಿನದಂದು ಅವರ ಮನೆಯ ಮುಂದೆ ರಂಗೋಲಿ ಹಾಕಬೇಕು.
ಆ.30 ರಂದು ಗೃಹಲಕ್ಷ್ಮಿಯೋಜನೆಯ ಚಾಲನಾ ಅದ್ದೂರಿ ಕಾರ್ಯಕ್ರಮ..! title=

ಬಳ್ಳಾರಿ : ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯು ಆ.30 ರಂದು ರಾಜ್ಯ ಮಟ್ಟದ ಚಾಲನೆ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ಮಹಾನಗರಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್ ನ ವಾರ್ಡ್ ಮಟ್ಟದಲ್ಲಿ ಹಾಗೂ ಪ್ರತಿಯೊಂದು ಗ್ರಾಮ ಪಂಚಾಯತ್ ಮಟ್ಟದಲ್ಲಿ ಎಲ್.ಇ.ಡಿ ಅಥವಾ ಪ್ರೊಜೆಕ್ಟರ್ ಪರದೆಯ ಮೂಲಕ ಮಹಿಳೆಯರು ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಯುವ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಮನೆಯ ಯಜಮಾನಿಯು ಕಾರ್ಯಕ್ರಮದ ದಿನದಂದು ಅವರ ಮನೆಯ ಮುಂದೆ ರಂಗೋಲಿ ಹಾಕಬೇಕು. ಮನೆಯ ಮುಂದೆ ರಂಗೋಲಿಯಲ್ಲಿ 'ನಾನು ಗೃಹಲಕ್ಷ್ಮೀ, ಮನೆಯ ಯಜಮಾನಿ' ಎಂದು ಬರೆಯುವಂತೆ ಮನವಿ ಮಾಡಿದ ಸಚಿವರು, ಒಟ್ಟಾರೆಯಾಗಿ ಗ್ರಾಮಗಳಲ್ಲಿ ಹಬ್ಬದ ವಾತವರಣ ಮೂಡಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಪ್ರಧಾನಿ ರೋಡ್ ಶೋ ಸಂದರ್ಭದಲ್ಲಿ ಬಿಜೆಪಿ ನಾಯಕರ ಮಾದರಿ ನಡೆ: ಬಸವರಾಜ ಬೊಮ್ಮಾಯಿ

ಗೃಹಲಕ್ಷ್ಮಿ ಯೋಜನೆಯು ಪ್ರಾರಂಭದಿಂದ (20-07-23) ಇಲ್ಲಿಯವರೆಗೆ (27-08-2023) 3,01,180 ಫಲಾನುಭವಿಗಳ ಪೈಕಿ 2,59,161 (ಶೇ.86.05) ಫಲಾನುಭವಿಗಳು  ನೊಂದಾಯಿಸಿಕೊಂಡಿದ್ದು, 42,019  ಅರ್ಜಿ ಸಲ್ಲಿಸಲು ಬಾಕಿಯಿರುತ್ತದೆ. ಈ ಪೈಕಿ ನೊಂದಣಿಯಲ್ಲಿ ಜಿಲ್ಲೆಯು ಐದನೇ ಸ್ಥಾನದಲ್ಲಿದೆ. ಕೂಡಲೇ ಅರ್ಹರು ಹತ್ತಿರದ ಗ್ರಾಮ ಒನ್,ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ತಾಲೂಕುವಾರು ಅಂಕಿ-ಅಂಶ : ಫಲಾನುಭವಿಗಳ ಗುರಿ: ಬಳ್ಳಾರಿ ನಗರ-77,945., ಬಳ್ಳಾರಿ ಗ್ರಾಮೀಣ-50,488., ಕುರುಗೋಡು-26,495., ಕಂಪ್ಲಿ-30,050., ಸಿರುಗುಪ್ಪ-64,350., ಸಂಡೂರು-51,852., ಒಟ್ಟು 3,01,180. ನೊಂದಣಿಯಾದ ಫಲಾನುಭವಿಗಳ ಸಂಖ್ಯೆ: ಬಳ್ಳಾರಿ ನಗರ-69,089 (ಶೇ.88.64), ಬಳ್ಳಾರಿ ಗ್ರಾಮೀಣ-42,406(ಶೇ.83.99), ಕುರುಗೋಡು-24,926 (ಶೇ.94.08), ಕಂಪ್ಲಿ-24,137(ಶೇ.80.32), ಸಿರುಗುಪ್ಪ-55,372(ಶೇ.86.05), ಸಂಡೂರು-43,231(ಶೇ. 83.37), ಒಟ್ಟು 2,59,161 (ಶೇ. 86.05).

ಇದನ್ನೂ ಓದಿ: ಹಣೆಯಲ್ಲಿ ಸಿಂಧೂರ, ಕೊರಳಲ್ಲಿ ಮಾಂಗಲ್ಯ..! ಚಂದ್ರಯಾನ-3 ವಿಜ್ಞಾನಿಗಳನ್ನು ಹೊಗಳಿದ ಕಂಗನಾ

101 ಕಡೆ ನೇರ ಪ್ರಸಾರ ವ್ಯವಸ್ಥೆ : ಆ.30 ರಂದು ಮೈಸೂರಿನಲ್ಲಿ ನಡೆಯುವ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆ ಸಮಾರಂಭದ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸಲು ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟ ಗ್ರಾಮ ಪಂಚಾಯತ್ ಮಟ್ಟ ಸೇರಿದಂತೆ 101 ಕಡೆ ನೇರ ಪ್ರಸಾರ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಬಳ್ಳಾರಿ ನಗರದಲ್ಲಿ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಮೈದಾನ, ಜಿಲ್ಲಾ ಕ್ರೀಡಾಂಗಣ ರಸ್ತೆಯ ವಾಲ್ಮೀಕಿ ಭವನ ಹಾಗೂ ಬಳ್ಳಾರಿ ಗ್ರಾಮಾಂತರದಲ್ಲಿ ಕುಡುತಿನಿ ಪಟ್ಟಣ ಪಂಚಾಯತ್ ಹಾಗೂ ಇದರ ವ್ಯಾಪ್ತಿಗೆ ಬರುವ 25 ಪಂಚಾಯತ್ ಕೇಂದ್ರ ಸ್ಥಾನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಂಡೂರು ತಾಲೂಕಿನ ಆದರ್ಶ ಕಲ್ಯಾಣ ಮಂಟಪ ಹಾಗೂ ಕುರೇಕುಪ್ಪ ಪುರಸಭೆಯ ಶ್ರೀ ಆಂಜನೇಯ ದೇವಸ್ಥಾನ ಮತ್ತು 26 ಪಂಚಾಯತ್ ಕೇಂದ್ರ ಸ್ಥಾನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರಕರ್ತರು ಎಂದರೆ ಭಯ : ಸಚಿವ ಲಾಡ್‌

ಸಿರುಗುಪ್ಪ ತಾಲೂಕಿನ ಬಾಲಾಜಿ ಚಿತ್ರಮಂದಿರ, ಕಾಡಾಸಿದ್ದೇಶ್ವರ ದೇವಸ್ಥಾನ ಹಾಗೂ ತೆಕ್ಕಲಕೋಟೆಯ 3ನೇ ವಾರ್ಡ್ ಪಕ್ಕಿರ ಮಸೀದಿ ಹತ್ತಿರ ಮತ್ತು 27 ಪಂಚಾಯತ್ ಕೇಂದ್ರ ಸ್ಥಾನಗಳಲ್ಲಿ, ಕುರುಗೋಡು ತಾಲೂಕಿನ ಎಸ್.ವಿ.ಕಲ್ಯಾಣ ಮಂಟಪ ಹಾಗೂ 12 ಪಂಚಾಯತ್ ಕೇಂದ್ರ ಸ್ಥಾನಗಳಲ್ಲಿ, ಕಂಪ್ಲಿ ತಾಲೂಕಿನ ಪುರಸಭೆ ಭವನ ಹಾಗೂ 20ನೇ ವಾರ್ಡ್ ಮಾರುತಿನಗರ ಮತ್ತು 11 ಪಂಚಾಯತ್ ಕೇಂದ್ರ ಸ್ಥಾನಗಳಲ್ಲಿ ವೀಕ್ಷಣೆ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ಸ್ಥಳೀಯ ಕಾರ್ಯಕ್ರಮದಲ್ಲಿ ಕನಿಷ್ಟ 2000 ಫಲಾನುಭವಿಗಳು ಭಾಗವಹಿಸುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಪ್ರತಿ ಕಾರ್ಯಕ್ರಮದ ಸ್ಥಳದಲ್ಲಿ ಒಂದು ಎಲ್.ಇ.ಡಿ ಟಿ.ವಿ ಅಥವಾ ಒಂದು 10*10 ಅಳತೆಯ ಎಲ್.ಇ.ಡಿ ಪರದೆ  ವ್ಯವಸ್ಥೆ ಮಾಡಲಾಗಿದೆ. ಟಿ.ವಿ.ಯಲ್ಲಿ ಮೈಸೂರು ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮದ ನೇರಪ್ರಸಾರವನ್ನು ಪ್ರದರ್ಶಿಸಲಾಗುವುದು. ಹಾಗೂ ಎಲ್.ಇ.ಡಿ ಪರದೆಯಲ್ಲಿ ಮೈಸೂರು ಕಾರ್ಯಕ್ರಮದ ಸ್ಥಳದಿಂದ ಸ್ಥಳೀಯ ಕಾರ್ಯಕ್ರಮದ ಸ್ಥಳದೊಂದಿಗೆ ಪರಸ್ಪರ ಸಂವಾದ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮ ನಡೆಸುವ ಸ್ಥಳಗಳಲ್ಲಿ ಪೂರ್ವಭಾವಿಯಾಗಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸ್ಥಳ/ಕಟ್ಟಡ (ಸಮುದಾಯ ಭವನ, ಶಾಲೆ, ಕಲ್ಯಾಣ ಮಂಟಪ ಇತ್ಯಾದಿ), ಟಿ.ವಿ ವ್ಯವಸ್ಥೆ, ಎಲ್.ಇ.ಡಿ/ ಪ್ರೊಜೆಕ್ಟರ್ ವ್ಯವಸ್ಥೆ, ಮೈಕ್ ವ್ಯವಸ್ಥೆ, ಹಾಸನಗಳ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಬ್ಯಾನರ್, ಲ್ಯಾಪ್ ಟ್ಯಾಪ್ ಅಂತರ್ಜಾಲ ವ್ಯವಸ್ಥೆ (ಇಂಟರ್ ನೆಟ್), ಛಾಯ ಗ್ರಹಣ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಟೀ-ಬಿಸ್ಕೆಟ್ ಹಾಗೂ ಉಪಹಾರ ವ್ಯವಸ್ಥೆ, ವಿದ್ಯುತ್‍ಚ್ಛಕ್ತಿ ವ್ಯವಸ್ಥೆ (ಯು.ಪಿ.ಎಸ್/ಜನರೇಟರ್), ಶಾಮಿಯಾನ ವ್ಯವಸ್ಥೆ ಮಾಡಲಾಗಿದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News