ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಡಿಸೆಂಬರ್ 30, 31 ಮತ್ತು ಜನವರಿ 1, 2023 ರಂದು ಒಟ್ಟು 3 ದಿನಗಳ ಕಾಲ ರಾಜ್ಯದ 18 ಕೇಂದ್ರಗಳಲ್ಲಿ ನಡೆಸಲಿದೆ.


COMMERCIAL BREAK
SCROLL TO CONTINUE READING

ಈಗಾಗಲೇ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಹಾಗೂ ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ಡಿಸೆಂಬರ್ 20 ರ ನಂತರವೂ ವೇಳಾಪಟ್ಟಿ ತಲುಪದಿದ್ದರೆ, ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇವರಲ್ಲಿ ವಿದ್ಯಾರ್ಥಿಗಳು ವಿಚಾರಿಸಬಹುದು.


ದೂ.ಸಂ: 080-26623584, 26612991, ಮೊ.ಸಂ: 8660777643, 9739666834, ಅಂತರ್ಜಾಲ ತಾಣ www.kasapa.in ಮೂಲಕ ಸಹ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.