ಯಡಿಯೂರಪ್ಪ ಬಿಟ್ರೆ ಇನ್ಯಾರಿಗೂ ಜವಾಬ್ದಾರಿ ಇಲ್ಲ: ಸಿದ್ದರಾಮಯ್ಯ

ಸಚಿವರ ಗೈರಿಗೆ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Prashobh Devanahalli | Edited by - Zee Kannada News Desk | Last Updated : Mar 21, 2022, 06:08 PM IST
  • ವಿಧಾನಸಭೆಯ ಕಲಾಪ
  • ಸಚಿವರು ಗೈರಾಗಿರುವುದನ್ನ ಪ್ರಶ್ನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
  • ಯಡಿಯೂರಪ್ಪ ಬಿಟ್ರೆ ಇನ್ಯಾರಿಗೂ ಜವಾಬ್ದಾರಿ ಇಲ್ಲ
  • ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ
ಯಡಿಯೂರಪ್ಪ ಬಿಟ್ರೆ ಇನ್ಯಾರಿಗೂ ಜವಾಬ್ದಾರಿ ಇಲ್ಲ: ಸಿದ್ದರಾಮಯ್ಯ title=
ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯ (Vidhanasabha) ಕಲಾಪದ ಸಂದರ್ಭದಲ್ಲಿ ಸಚಿವರು ಗೈರಾಗಿರುವುದನ್ನ ಪ್ರಶ್ನಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ (Yeddyurappa) ಬಿಟ್ರೆ ಇನ್ಯಾರಿಗೂ ಜವಾಬ್ದಾರಿ ಇಲ್ಲ, ಅವರನ್ನೇ ಮುಂದೆ ಕೂಡಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ನವೀನ್ ಮೃತದೇಹ ತಾಯ್ನಾಡಿಗೆ : ದೂರವಾಣಿ ಕರೆ ಮೂಲಕ ಪಿಎಂಗೆ ಧನ್ಯವಾದ ಎಂದ ಸಿಎಂ

ಸಚಿವರ ಗೈರಿಗೆ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದಸ್ಯರು ಚರ್ಚೆ ಮಾಡುವಾಗ ಸಚಿವರು ಬರಾಬೇಕು. ಸಚಿವರಿಲ್ಲದಿದ್ರೆ ಬೇರೆ ಸಚಿವರು ಬರೆದುಕೊಳ್ಳಬೇಕು. ಇಲ್ಲದಿದ್ರೆ ಸಚಿವರು ಹೇಗೆ ಉತ್ತರ ಕೊಡ್ತಾರೆ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Gas Cylinder Explosion : ಗ್ಯಾಸ್ ಸಿಲಿಂಡರ್ ಸ್ಫೋಟ : ಇಬ್ಬರು ಸಜೀವ ದಹನ

ಸದಸ್ಯರು ಮಾತಾಡೋದನ್ನು ಸಚಿವರು ಬರೆದುಕೊಂಡು ಉತ್ತರ ಕೊಡಬೇಕು. ಈ ವೇಳೆ ಯಡಿಯೂರಪ್ಪ ಹೊಗಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ ಮಾತ್ರ ಕಲಾಪದಲ್ಲಿ ಇರುತ್ತಾರೆ. ಯಡಿಯೂರಪ್ಪ ಅವರಿಗೆ ಇರುವ ಜವಾಬ್ದಾರಿ ಬೇರೆಯವರಿಗೆ ಇಲ್ಲ ಎಂದಿದ್ದು ಗಮನಸೆಳೆಯಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News