ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಸಂಪುಟ ಸೇರ್ಪಡೆಗೆ ವಿರೋಧ

ವಿಧಾನಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದು ಅವರಿಗೆ ಸಚಿವ ಸ್ಥಾನ ಅಲಂಕರಿಸುವ ನೈತಿಕತೆ ಇಲ್ಲ ಎಂದು ಆರೋಪಿಸಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.

Last Updated : Sep 1, 2017, 12:10 PM IST
ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಸಂಪುಟ ಸೇರ್ಪಡೆಗೆ ವಿರೋಧ title=

ಬೆಂಗಳೂರು : ವಿಧಾನಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದು ಅವರಿಗೆ ಸಚಿವ ಸ್ಥಾನ ಅಲಂಕರಿಸುವ ನೈತಿಕತೆ ಇಲ್ಲ ಎಂದು ಆರೋಪಿಸಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.

ಆಗಸ್ಟ್ 30ರಂದು ಬಿಬಿಎಂಪಿ ಚುನಾವಣಾ ಆಯೋಗಕ್ಕೆ ಆರ್.ಬಿ.ತಿಮ್ಮಾಪುರ ಸೇರಿದಂತೆ ಒಟ್ಟು 8 ವಿಧಾನಪರಿಷತ್ ಸದಸ್ಯರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವರದಿ ಸಲ್ಲಿಸಿತ್ತು.

ಈ ನಿಟ್ಟಿನಲ್ಲಿ ಆರ್.ಬಿ.ತಿಮ್ಮಾಪುರ ಸಚಿವ ಸ್ಥಾನ ಅಲಂಕರಿಸಲು ಅವಕಾಶ ಮಾಡಿ ಕೊಡದಂತೆ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ. 

ರಾಜ್ಯಪಾಲರಿಗೆ ದೂರು ಸಲ್ಲಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಈಗಾಗಲೇ 8 ವಿಧಾನಪರಿಷತ್ ಸದಸ್ಯರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಬಿಎಂಪಿ ತನ್ನ ಆಂತರಿಕ ವರದಿ ಸಲ್ಲಿಸಿದೆ. ಈ ವರದಿಯ ಪ್ರಕಾರ ಆ 8 ವಿಧಾನಪರಿಷತ್ ಸದಸ್ಯರನ್ನು ಅಮಾನತ್ತುಗೊಳಿಸಬೇಕು. ಜೊತೆಗೆ ಇಂದು ನಡೆಯುವ ಸಂಪುಟ ವಿಸ್ತರಣೆಯಲ್ಲಿ ಆರ್.ಬಿ.ತಿಮ್ಮಾಪುರ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬಾರದೆಂದು ಮನವಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ರಾಜ್ಯಪಾಲ ವಜುಬಾಯಿ ವಾಲಾ ತಿಳಿಸಿದ್ದಾರೆ ಎಂದು ಶೆಟ್ಟರ್ ಹೇಳಿಕೆ ನೀಡಿದರು.

Trending News