ಬೆಂಗಳೂರು : ಇನ್ನೂ ಪೂರ್ಣಾವಾಗಿ ಫಲಿತಾಂಶ ಬಂದಿಲ್ಲ, ಇನ್ನೂ ಬರುತ್ತಿದೆ. ಪಂಜಾಬ್ ನಲ್ಲಿ ಮಾತ್ರ ನಾವು  ಅಧಿಕಾರದಲ್ಲಿದ್ದೆವು. ಬೇರೆ ರಾಜ್ಯಗಳಲ್ಲಿ ನಾವು ಅಧಿಕಾರದಲ್ಲಿರಲಿಲ್ಲ. ಉತ್ತರಖಂಡ, ಗೋವಾದಲ್ಲಿ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : DV Sadanand gowda : 'ಡಿಕೆಶಿ ಕೂಡಾ ಗೋವಾದಲ್ಲಿ ಗಾಳ ಹಾಕೋಕೆ ಹೋಗಿದ್ದಾರೆ'


ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ(Siddaramaiah), ಪಂಜಾಬ್ ನಲ್ಲೇನು ಬಿಜೆಪಿ ಬಂದಿಲ್ಲ ಆಪ್ ಅಧಿಕಾರಕ್ಕೆ ಬಂದಿದೆ. ಈ ಚುನಾವಣೆಗಳಿಂದ ನಾನೇನು ಬಹಳ ಏನ್ ನಿರೀಕ್ಷೆ ಇರಲಿಲ್ಲ. ಆದ್ರೆ ಗೋವಾ, ಉತ್ತರಖಂಡದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಅಂದಾಜು ಇತ್ತು. ಈ ಚುನಾವಣೆಯಿಂದ ಧೈರ್ಯ ಕಳೆದುಕೊಳ್ಳುವಂತವೆನ್ನಿಲ್ಲ. ಪಂಜಾಬ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದಾರಾ? ಅಧಿಕಾರ ಇರೋ ರಾಜ್ಯಗಳಲ್ಲಿ ಗೆದ್ದಿದ್ದಾರೆ ಅಷ್ಟೆ. ಇದರಿಂದ ಬಹಳ ಜಂಬ ಪಡೋ ಆಗಿಲ್ಲ. ಪಲಿತಾಂಶದ ಬಗ್ಗೆ ಸಮರ್ಥಿಸಿಕೊಂಡರು. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.